ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ರೈತರ ಸಾಲಮನ್ನಾ ಆಗುತ್ತೋ ಇಲ್ಲವೋ, ಆದರೆ ನಮ್ಮ ಬೇಡಿಕೆ ಈಡೇರಬೇಕು: ಕಾರ್ಮಿಕರ ಸಂಘ

ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರಾಜ್ಯ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜ್ಯದ ನಾನಾ ವಲಯಗಳಿಂದ ಹಲವು ಬೇಡಿಕೆಗಳು ವ್ಯಕ್ತವಾಗುತ್ತಿವೆ.

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರಾಜ್ಯ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜ್ಯದ ನಾನಾ ವಲಯಗಳಿಂದ ಹಲವು ಬೇಡಿಕೆಗಳು ವ್ಯಕ್ತವಾಗುತ್ತಿವೆ.
ಪ್ರಮುಖವಾಗಿ ಕುಮಾರಸ್ವಾಮಿ ಅವರ  ಬಹು ನಿರೀಕ್ಷಿತ ಬಜೆಟ್ ಮೇಲೆ ಕಾರ್ಮಿಕ ವಿಭಾಗ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದು, ರೈತರ ಸಾಲಮನ್ನಾ ವಿಚಾರ ಎಲ್ಲರ ಕೇಂದ್ರ ಬಿಂದುವಾಗಿದ್ದರೂ ಕಾರ್ಮಿಕರ  ಬೇಡಿಕೆಗಳಿಗೆ ಸಿಎಂ ಕುಮಾರಸ್ವಾಮಿ ಮನ್ನಣೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕಾರ್ಮಿಕರ ಸಂಘ ಹೇಳಿದೆ.
ಈ ಬಗ್ಗೆ ಮಾತನಾಡಿರುವ ಎಫ್ ಕೆಸಿಸಿಐ ಅಧ್ಯಕ್ಷ ಕೆ ಸುಧಾಕರ್ ಶೆಟ್ಟಿ ಅವರು, ರೈತರ ಸಾಲ ಮನ್ನ ವಿಚಾರವಾಗಿ ರಾಜ್ಯ ಸರ್ಕಾರ ಎಷ್ಟು ಗಂಭೀರವಾಗಿದೆ ಎಂಬುದು ತಿಳಿದಿಲ್ಲ. ಆದರೆ ಕಾರ್ಮಿಕ ಸಂಘಟನೆಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಸಿಎಂ ಕುಮಾರಸ್ವಾಮಿ ಈಡೇರಿಸಬೇಕಿದೆ. ಸರ್ಕಾರದ ನಿಲುವು ನಮ್ಮ ಪರವಾಗಿರಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.
ಇನ್ನು ಕಾರ್ಮಿಕ ವಲಯದಲ್ಲಿ ಪ್ರಮುಖವಾಗಿ ಗಾರ್ಮೆಂಟ್ಸ್ ವಲಯದ ನೌಕರರು ತಮ್ಮ ಪಿಂಚಣಿ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT