ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್: ಚನ್ನಪಟ್ಟಣದ ಕೆಎಸ್ಐಸಿ ಪುನೇಶ್ಚೇತನಕ್ಕೆ 5 ಕೋಟಿ ರು.

ಮೈಸೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ರೀಲರುಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಉತ್ಪಾದಿಸುವ ರೇಷ್ಮೆ ಗೂಡಿಗೆ ಸ್ಥಳೀಯವಾಗಿ ಮಾರಾಟ ...

ಬೆಂಗಳೂರು:  ಮೈಸೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ರೀಲರುಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಉತ್ಪಾದಿಸುವ ರೇಷ್ಮೆ ಗೂಡಿಗೆ ಸ್ಥಳೀಯವಾಗಿ ಮಾರಾಟ ವ್ಯವಸ್ಥೆ ಕಲ್ಪಿಸಲು ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಜಿಲ್ಲೆಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ಸ್ಥಾಪಿಸಲಾಗುವುದು. ಇದಕ್ಕಾಗಿ 2018-19ನೇ ಸಾಲಿಗೆ ಒಂದು ಕೋಟಿ ರೂ. ಮೀಸಲಿಡಲಾಗಿದೆ.
ವಿಶ್ವಬ್ಯಾಂಕ್ ನೆರವಿನೊಂದಿಗೆ 70ರ ದಶಕದಲ್ಲಿ ರೇಷ್ಮೆ ಕೃಷಿಗೆ ಪೂರಕವಾಗಲೆಂದು ಬೆಂಗಳೂರು ಸಮೀಪದ ತಲಘಟ್ಟಪುರದಲ್ಲಿ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು. ಈ ಸಂಸ್ಥೆಯ ಪೂರ್ಣ ಪ್ರಮಾಣದ ಅನುಕೂಲ ಪಡೆಯಲು ತಜ್ಞರಿಂದ ಸಂಪೂರ್ಣ ಅಧ್ಯಯನ ನಡೆಸಿ ವರದಿ ಪಡೆದು ಈ ಸಂಸ್ಥೆಯ ಪುನಶ್ಚೇತನ ಮಾಡುವ ಉದ್ದೇಶಕ್ಕಾಗಿ 5 ಕೋಟಿ ರೂ.ಗಳನ್ನು ನೀಡಲಾಗುವುದು.
ಸಾಂಪ್ರದಾಯಿಕ ರೇಷ್ಮೆ ವಸ್ತ್ರ ಉತ್ಪಾದನೆಯ ಜೊತೆಗೆ ರೇಷ್ಮೆ ಉಪ ಉತ್ನನ್ನಗಳಿಗೆ ಮಾರುಕಟ್ಟೆ  ಕಲ್ಪಿಸಲು  2 ಕೋಟಿ ರು ಮಿಸಲಿಡಲಾಗಿದೆ.
ಚನ್ನಪಟ್ಟಣದಲ್ಲಿರುವ ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ (ಕೆ.ಎಸ್.ಐ.ಸಿ) ಘಟಕದ ಪುನಶ್ಚೇತನಕ್ಕಾಗಿ 5 ಕೋಟಿ ರೂ.ಗಳನ್ನು ಒದಗಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT