ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ ಬಜೆಟ್

ಸಾಲಮನ್ನಾ ಮಾಡಿದ್ದಕ್ಕೆ ಬಿಜೆಪಿ ನನಗೆ ಸ್ವಲ್ಪ ಕ್ರೆಡಿಟ್ ಕೊಡಲಿ: ಎಚ್.ಡಿ. ಕುಮಾರಸ್ವಾಮಿ

ರೈತರ ಸಾಲ ಮನ್ನಾದಂತಹ ದೊಡ್ಡ ಸವಾಲನ್ನು ಸ್ವೀಕರಿಸಿದ ಬಳಿಕವೂ ಉಳಿತಾಯದ ಬಜೆಟ್‌ ಮಂಡಿಸಲಾಗಿದೆ. ಇದಕ್ಕೆ ಬಿಜೆಪಿಯವರು ನನಗೆ ಕ್ರೆಡಿಟ್ ಕೊಡಬೇಕು ...

ಬೆಂಗಳೂರು: ರೈತರ ಸಾಲ ಮನ್ನಾದಂತಹ ದೊಡ್ಡ ಸವಾಲನ್ನು ಸ್ವೀಕರಿಸಿದ ಬಳಿಕವೂ ಉಳಿತಾಯದ ಬಜೆಟ್‌ ಮಂಡಿಸಲಾಗಿದೆ. ಇದಕ್ಕೆ ಬಿಜೆಪಿಯವರು ನನಗೆ ಕ್ರೆಡಿಟ್ ಕೊಡಬೇಕು ಎಂದು ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ.
ಬಜೆಟ್ ಮಂಡನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ಪಕ್ಕದ ರಾಜ್ಯಗಳಿಗೆ ಹೋಲಿಸಿದರೇ ನಮ್ಮ ಕರ್ನಾಟಕದಲ್ಲಿ  ತೆರಿಗೆ, ಇಂಧನದರಗಳು ಕಡಿಮೆ ಇದೆ, ಕೇಂದ್ರ ಸರ್ಕಾರ ಇಂಧನ ದರವನ್ನು ಶೇ.230 ರಷ್ಟು ಏರಿಸುತ್ತಿದೆ, ಹೀಗಿರುವಾಗ ನನ್ನ ಬಜೆಟ್ ನಲ್ಲಿ ಇಂಧನ ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ  ಬಿಜೆಪಿಗಿಲ್ಲ ಎಂದು ಕಿಡಿ ಕಾರಿದರು.
ಬಿಜೆಪಿಯವರ ಆಧಾರರಹಿತ ಆರೋಪಗಳು ಸಮಾಜದ ನೆಮ್ಮದಿಯನ್ನು ಕೆಡಿಸುತ್ತಿವೆ, ಬಿಜೆಪಿಯವರ ಬೆಂಕಿ ಹಚ್ಚುವ ಪ್ರವೃತ್ತಿಗೆ ಅವಕಾಶ ನೀಡದಂತೆ ಕರಾವಳಿ ಜನರಲ್ಲೂ ಮನವಿ ಮಾಡಿಕೊಳ್ಳುತ್ತೇನೆ, ಸಮ್ಮಿಶ್ರ ಸರ್ಕಾರ ಇಡೀ ರಾಜ್ಯದ ಅಭಿವೃದ್ಧಿಗಾಗಿ ಇದೆ ಎಂದು ಹೇಳಿದ್ದಾರೆ. 
ನಾವು ಪ್ರಿಂಟಿಂಗ್‌ ಮೆಷಿನ್‌ ಇಟ್ಟಿಲ್ಲವೆಂದು ವಿಧಾನ ಪರಿಷತ್‌ನಲ್ಲಿ ಯಡಿಯೂರಪ್ಪ ಹೇಳಿದಂತೆ ನಾವು ಹೇಳಿಲ್ಲ  ಸಿಎಂ ಕಟುಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT