ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ ಬಜೆಟ್

ರಾಮನಗರದ ಮೇಲೆ ಸಿಎಂಗೆ ಉಕ್ಕಿ ಹರಿದ ಪ್ರೀತಿ: ಫಿಲ್ಮ್ ಯೂನಿವರ್ಸಿಟಿ ನಿರ್ಮಾಣಕ್ಕೆ 30 ಕೋಟಿ!

ಕುಮಾರಸ್ವಾಮಿಯವರ ಸ್ವಕ್ಷೇತ್ರವೂ ಆಗಿರುವ ರಾಮನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಲನಚಿತ್ರ ವಿಶ್ವವಿದ್ಯಾನಿಲಯ ತೆರೆಯಲು 30 ಕೋಟಿ ರೂ. ಬಂಡವಾಳ...

ಬೆಂಗಳೂರು: ರಾಮನಗರ ಜಿಲ್ಲೆ ಮೇಲೆ ಸಿಎಂ ಕುಮಾರ ಸ್ವಾಮಿ ತುಸು ಹೆಚ್ಚೆ ಒಲವು ತೋರಿದ್ದಾರೆ. ದೊಡ್ಡದಾಗಿ ಬೆಳೆಯುತ್ತಿರುವ ಚಲನಚಿತ್ರೋದ್ಯಮದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚಿತ್ರದ ತಯಾರಿಕೆ, ನಿರ್ದೇಶನ, ಛಾಯಾಚಿತ್ರ, ಧ್ವನಿ, ಸಂಕಲನ ಇತ್ಯಾದಿ ವಿಷಯಗಳಲ್ಲಿ ತರಬೇತಿ ನೀಡಲು ಚಲನಚಿತ್ರ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿದ್ದಾರೆ. 
ಕುಮಾರಸ್ವಾಮಿಯವರ ಸ್ವಕ್ಷೇತ್ರವೂ ಆಗಿರುವ ರಾಮನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಲನಚಿತ್ರ ವಿಶ್ವವಿದ್ಯಾನಿಲಯ ತೆರೆಯಲು 30 ಕೋಟಿ ರೂ. ಬಂಡವಾಳ ಮೀಸಲಿಟ್ಟಿದ್ದಾರೆ. 
ರಾಮನಗರ ಫಿಲಂ ಸಿಟಿಯಲ್ಲಿ ಛಾಯಾಚಿತ್ರ, ಸಂಕಲನ, ಸೌಂಡ್ ರೆರ್ಕಾಡಿಂಗ್ ಮಾಡುವ ಸಂಸ್ಥೆ, ಅನಿಮೇಷನ್ ಸ್ಟುಡಿಯೋಗಳು, ಕಂಪ್ಯೂಟರ್ ಗ್ರಾಫಿಕ್ ಸ್ಟುಡಿಯೋಗಳು ಚಲನಚಿತ್ರ ರಂಗಕ್ಕೆ ಸೇವೆ ಸಲ್ಲಿಸುವ ಉದ್ಯಮಗಳಿಗೆ ಪ್ರೋತ್ಸಾಹ ನೀಡಲು 40 ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಬಜೆಟ್​ನಲ್ಲಿ ಘೋಷಿಸಿದ್ಧಾರೆ. ಹೊರ ದೇಶದಿಂದ ಚಿತ್ರ ನಿರ್ಮಾಣಕ್ಕಾಗಿ ಬರುವ ಕಲಾವಿದರು ಮುಂತಾದ ತಂತ್ರಜ್ಞರಿಗೆ ವಸತಿ ಹಾಗೂ ಇನ್ನಿತರೆ ಅವಶ್ಯಕ ಮೂಲಭೂತ ಸೌಲಭ್ಯಗಳ ನಿರ್ಮಾಣಕ್ಕಾಗಿ 20 ಕೋಟಿ ರೂ. ನೀಡುವುದಾಗಿ ಬಜೆಟ್​ನಲ್ಲಿ ಪ್ರಕಟಿಸಿದ್ದಾರೆ. 
ರಾಮನಗರದಲ್ಲಿ 40 ಕೋಟಿ ವೆಚ್ಚದಲ್ಲಿ ಸೂಪರ್ ಸ್ಫೆಷಾಲಿಟಿ ಆಸ್ಪತ್ರೆ ಆರ್ಟ್ಸ್ ಅಂಡ್ ಕ್ರಾಫ್ಟ್ ವಿಲೇಜ್. ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT