ಎಚ್.ಡಿ ಕುಮಾರ ಸ್ವಾಮಿ(ಸಾಂದರ್ಭಿಕ ಚಿತ್ರ) 
ರಾಜ್ಯ ಬಜೆಟ್

ಹೊಸ ತಾಲೂಕುಗಳಿಗೆ ಕುಮಾರ ಬಜೆಟ್ ನಲ್ಲಿಲ್ಲ ಅನುದಾನ: ಭುಗಿಲೆದ್ದ ಅಸಮಾಧಾನ

45 ದಶಕಗಳ ಬೇಡಿಕೆಯಾಗಿದ್ದ ಹೊಸ ತಾಲೂಕುಗಳ ಸ್ಥಾಪನೆಗೆ ಪರಿಷತ್ ಮತ್ತು ವಿಧಾನ ಸಭೆ ಅನುಮೋದನೆ ನೀಡಿದೆ. ಆದರೆ ಆರಂಭದಲ್ಲೇ ಅದಕ್ಕೆ ...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ ಹಲವರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ,.
45 ದಶಕಗಳ ಬೇಡಿಕೆಯಾಗಿದ್ದ ಹೊಸ ತಾಲೂಕುಗಳ ಸ್ಥಾಪನೆಗೆ ಪರಿಷತ್ ಮತ್ತು ವಿಧಾನ ಸಭೆ ಅನುಮೋದನೆ ನೀಡಿದೆ. ಆದರೆ ಆರಂಭದಲ್ಲೇ ಅದಕ್ಕೆ ಸಿಗಬೇಕಾಗದ ಅನದಾನ ಸಿಗುತ್ತಿಲ್ಲ.
ಮಾಜಿ ಸಿಎಂ ಸಿದ್ದರಾಮಯ್ಯ ಮಂಡಿಸಿದ 2017-18 ನೇ ಸಾಲಿನ ಆಯವ್ಯಯದಲ್ಲಿ 21 ಜಿಲ್ಲೆಗಳಲ್ಲಿ 50 ತಾಲೂಕುಗಳ ಸ್ಥಾಪನೆಗಾಗಿಗ 2ಸಾವಿರ ಕೋಟಿ ರು ಘೋಷಿಸಿದ್ದರು.
ಕಳೆದ ಐದು ವರ್ಷಗಳಲ್ಲಿ ಹೊಸ ತಾಲೂಕು ರಚನೆ ಮಾಡುವುದರಲ್ಲಿ ಇಲ್ಲಿನ ಜನ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಕವಟಗಿಮಠ ಮಹಾಂತೇಶ್ ಹೇಳಿದ್ದಾರೆ,
ಹೊಸ ತಾಲೂಕುಗಳ ರಚನೆಯಾದ ನಂತರ ಹಿಂದಿನ ಸರ್ಕಾರ ಇವುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾಗಿತ್ತು, ಅಗತ್ಯ ಸಿಬ್ಬಂದಿ ನೇಮಕಾತಿ  ಮಾಡಿಲ್ಲ, ಕೆಲವು ತಾಲೂಕುಗಳಲ್ಲಿ ರೆವಿನ್ಯೂ ಇನ್ಸ್ ಪೆಕ್ಚರ್ ಘಲೇ ವಿಶೇಷ ತಹಶೀಲ್ದಾರ್ ಆಗಿ ನೇಮಿಸಲಾಗಿದೆ, 
ತಹಶೀಲ್ದಾರ್ ಗಳಿಲ್ಲದೇ ರಚನೆಯಾಗಿರುವ ಹೊಸ ತಾಲೂಕುಗಳದ್ದು ತ್ರಿಶಂಕು ಸ್ಥಿತಿಯಾಗಿದೆ ಮುಂದಿನ ವಿಧಾನ ಪರಿಷತ್ ಅದಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದ್ದಾರೆ.  
ಈ ಸಂಬಂಧ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದು, ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಹಾಗೂ ಎಲ್ಲಾ 50 ತಾಲೂಕುಗಳಿಗೂ ತಹಶೀಲ್ದಾರ್ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT