ನವದೆಹಲಿ: 2018-19 ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಅನುದಾನ ಘೋಷಿಸಿದ್ದು, ಗ್ರಾಮೀಣ ಭಾಗದಲ್ಲಿರುವ ಶಾಲೆಗಳಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಘೋಷಿಸಿದ್ದಾರೆ.
ಇದೇ ವೇಳೆ ಶಿಕ್ಷಕರ ತರಬೇತಿಗಾಗಿ ಸಮಗ್ರ ಬಿ.ಎಡ್ ಕೋರ್ಸ್ ನ್ನು ಪ್ರಾರಂಭಿಸುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ. ಇನ್ನು ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಬುಡಕಟ್ಟು, ಎಸ್ ಟಿ, ಎಸ್ ಸಿ ವಿದ್ಯಾರ್ಥಿಗಳಿಗಾಗಿ ಏಕಲವ್ಯ ಶಾಲೆಯನ್ನು ಸ್ಥಾಪಿಸುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಘೋಷಣೆಯಾದ ಇನ್ನಿತರ ಅಂಶಗಳು
ಪ್ರತಿ ವರ್ಷ 1000 ಬಿ. ಟೆಕ್ ನ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಧಾನ ಮಂತ್ರಿ ಸ್ಕಾಲರ್ ಶಿಪ್ ಅಡಿಯಲ್ಲಿ ಐಐಟಿಗಳಲ್ಲಿ ಪಿಹೆಚ್ ಡಿ ಮಾಡಲು ಉತ್ತೇಜನ, ಪ್ರಧಾನ ಮಂತ್ರಿ ಸ್ಕಾಲರ್ ಶಿಪ್
ವಡೋದರಾದಲ್ಲಿ ರೈಲ್ವೆ ವಿವಿ ಸ್ಥಾಪನೆ
ಏಕಲವ್ಯ ವಸತಿ ಶಾಲೆಯಿಂದ 20 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
ಶಿಕ್ಷಣ ಸೆಸ್ ಶೇ.4ರಷ್ಟು ಏರಿಕೆ
ಶಿಕ್ಷಣ ಮೂಲಸೌಕರ್ಯಕ್ಕಾಗಿ 1 ಲಕ್ಷ ಕೋಟಿ ಅನುದಾನ
24 ಹೊಸ ಮೆಡಿಕಲ್ ಕಾಲೇಜು
2022 ರ ವೇಳೆಗೆ ರೈಸ್ (Revitalising Infrastructure and Systems in Education) ಪುನಾರಂಭ
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos