ಅರವಿಂದ್ ಕೇಜ್ರಿವಾಲ್ 
ಕೇಂದ್ರ ಬಜೆಟ್

ಬಜೆಟ್ 2018: ಕೇಂದ್ರದಿಂದ ಮಲತಾಯಿ ಧೋರಣೆ ಎಂದ ಕೇಜ್ರಿವಾಲ್

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ 2018ನೇ ಸಾಲಿನ ಬಜೆಟ್ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ....

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ 2018ನೇ ಸಾಲಿನ ಬಜೆಟ್ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮುಂದುವರೆಸಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ನಾನು ಕೇಂದ್ರದ ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದೆ. ಆದರೆ ನನ್ನ ನಿರೀಕ್ಷೆ ಸುಳ್ಳಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 
ಜೇಟ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಸಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ತೆರಿಗೆ ಮತ್ತು ಸಂಕದಲ್ಲಿ ದೆಹಲಿಯ ಪಾಲಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೇಂದ್ರ ಸರ್ಕಾರ ದೆಹಲಿ ನಿವಾಸಿಗಳನ್ನು ಎರಡನೇ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಪೊಲೀಸರಿಗೆ ಯಾವುದೇ ಯೋಜನೆ ಘೋಷಿಸಿಲ್ಲ ಮತ್ತು ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ವಿದ್ಯುತ್ ಚಾಲಿತ ಬಸ್ ಗಳಿಗೆ 2 ಸಾವಿರ ಕೋಟಿ ರುಪಾಯಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಪ್ ಸರ್ಕಾರ ಮಾಡಿದ್ದ ಮನವಿಯನ್ನು ಕಡೆಗಣಿಸಲಾಗಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT