ಪಿ. ಚಿದಂಬರಂ 
ಕೇಂದ್ರ ಬಜೆಟ್

ಬರೀ 'ಬಾಯಿ ಮಾತು', ಜೇಟ್ಲಿ ಬಜೆಟ್ ನಿರಾಶಾದಾಯಕ: ಕಾಂಗ್ರೆಸ್

ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಸಿದ 2018ನೇ ಸಾಲಿನ ಬಜೆಟ್ ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು,...

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಸಿದ 2018ನೇ ಸಾಲಿನ ಬಜೆಟ್ ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೇವಲ 'ಬಾಯಿ ಮಾತಿ'ಗೆ ಸೀಮಿತವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರ ಮತ್ತು ಕೆಳ ವರ್ಷದವರ ಮೂಗಿಗೆ ತುಪ್ಪ ಸವರುವ ಯತ್ನ ಮಾಡಿದೆ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಕಾಂಗ್ರೆಸ್ ನಾಯಕ ಮನಿಶ್ ತಿವಾರಿ ಅವರು ಹೇಳಿರುವುದಾಗಿ ಎನ್ಎನ್ಐ ವರದಿ ಮಾಡಿದೆ.
ಹಣಕಾಸಿನ ಬಲವರ್ಧನೆ ಪರೀಕ್ಷೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಹೇಳಿದ್ದಾರೆ.
ಈ ಬಾರಿ ಬಜೆಟ್ ನಲ್ಲಿ ರೈತರ ಬಗ್ಗೆ ಗಮನ ಹರಿಸಲಾಗಿದೆ. ಆದರೆ ಇದು ಸಾಕಾವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವರು ರೈತರ ಸುಧಾರಣೆ ಮಾಡುವ ಯತ್ನ ಮಾಡಿದ್ದಾರೆ. ರೈತರ ಮತ್ತು ಗಾಮೀಣ ಜನರ ಸಮಸ್ಯೆಗಳು ಅಪಾರ. ಹೀಗಾಗಿ ಈಗ ತೆಗೆದುಕೊಂಡಿರುವ ಕ್ರಮಗಳು ಸಾಕಾಗುವುದಿಲ್ಲ ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದಿ ಎನ್ ಡಿಎ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT