ಬಜೆಟ್ ಮಂಡನೆ ವೇಳೆ ಕುಳಿತಿದ್ದ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಚಿತ್ರ 
ಕೇಂದ್ರ ಬಜೆಟ್

ದೇಶದ ಪ್ರಗತಿ ಸಾಧನೆಗೆ ಪೂರಕವಾದ ಜನಪರ ಬಜೆಟ್: ಪ್ರಧಾನಿ ನರೇಂದ್ರ ಮೋದಿ

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ದಿ, ಕೃಷಿ, ಬಡ ಹಿಂದುಳಿದ ವರ್ಗದವರ ಕಲ್ಯಾಣ, ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡುವ ಮೂಲಕ ದೇಶದ ಪ್ರಗತಿಗೆ ಪೂರಕವಾದ ಜನಪರ ಬಜೆಟ್ ಮಂಡಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ದೆಹಲಿ:ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ದಿ, ಕೃಷಿ, ಬಡ ಹಿಂದುಳಿದ ವರ್ಗದವರ ಕಲ್ಯಾಣ, ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡುವ ಮೂಲಕ ದೇಶದ ಪ್ರಗತಿಗೆ ಪೂರಕವಾದ ಜನಪರ ಬಜೆಟ್ ಮಂಡಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕೃಷಿ ,ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ.  ರೈತ, ಸ್ನೇಹಿ. ಜನಸಾಮಾನ್ಯರ, ಹಾಗೂ ಹೂಡಿಕೆಗೆ ಪೂರಕವಾದ ಬಜೆಟ್ ಮಂಡಿಸಲಾಗಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೂ. ಮೀಸಲಿರಿಸಲಾಗಿದೆ. ಬಡವರು ಆರ್ಥಿಕವಾಗಿ ಹಿಂದುಳಿದವ ವರ್ಗದವರಿಗೆ ಆರೋಗ್ಯ ಯೋಜನೆ ಜಾರಿ ಮಾಡಲಾಗಿದೆ. ಆಯುಷ್ಮನ್ ಭಾರತ್ ಯೋಜನೆಯಿಂದ 10 ಕೋಟಿ ಜನರಿಗೆ ಆರೋಗ್ಯ ಸೌಲಭ್ಯ ದೊರಕಲಿದೆ. ವಿಶ್ವದಲ್ಲಿಯೇ ಇದು ಅತಿದೊಡ್ಡ ಸರ್ಕಾರದ ನೆರವಿನ ಆರೋಗ್ಯ ಕಾರ್ಯಕ್ರಮವಾಗಿದೆ ಎಂದರು.

ಯುವಕರ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಮಹಿಳೆಯರ ಭವಿಷ್ಯ ನಿಧಿ ದೇಣಿಗೆಯನ್ನು ಶೇಕಡ 8ಕ್ಕೆ ಇಳಿಸಲಾಗಿದೆ. ಆದರೆ, ಮಾಲೀಕರು ಶೇಕಡಾ 12 ರಷ್ಟು ನೀಡಬೇಕಿದೆ. ಮಧ್ಯಮವರ್ಗದವರು ಹೆಚ್ಚಿನ ಉಳಿತಾಯಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!