ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2018: ಸಂಪ್ರದಾಯ ಮುರಿದು ಮೊದಲ ಬಾರಿಗೆ ಹಿಂದಿಯಲ್ಲಿ ಬಜೆಟ್ ಮಂಡನೆ

ಕೇಂದ್ರ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕೇಂದ್ರ ವಿತ್ತ ಸಚಿವ ಹೊಸದೊಂದು ದಾಖಲೆಗೆ ಸಾಕ್ಷಿಯಾಗಲಿದ್ದು, ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಹಿಂದಿ ಭಾಷೆಯಲ್ಲಿ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಕೇಂದ್ರ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕೇಂದ್ರ ವಿತ್ತ ಸಚಿವ ಹೊಸದೊಂದು ದಾಖಲೆಗೆ ಸಾಕ್ಷಿಯಾಗಲಿದ್ದು, ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಹಿಂದಿ ಭಾಷೆಯಲ್ಲಿ  ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಈ ಬಾರಿಯ ಆಯವ್ಯಯ ಮಂಡನೆಯಲ್ಲಿ ಹಲವು ಸಂಪ್ರದಾಯಗಳನ್ನು ಮುರಿಯುತ್ತಿದ್ದು, ಇಷ್ಟು ದಿನ ಚಾಲ್ತಿಯಲ್ಲಿದ್ದ ಇಂಗ್ಲೀಷ್ ಭಾಷೆಯಲ್ಲಿನ ಬಜೆಟ್ ಮಂಡನೆಯನ್ನು  ಬದಿಗೊತ್ತಿ ಇದೇ ಮೊದಲ ಬಾರಿಗೆ ಹಿಂದಿಯಲ್ಲಿ ಬಜೆಟ್ ಮಂಡನೆ ಮಾಡಲಾಗುತ್ತಿದೆ. 
ಸ್ವಾತಂತ್ರ್ಯ ನಂತರದಲ್ಲಿ ಇಲ್ಲಿಯವರೆಗೂ 37 ಮಂದಿ ಬಜೆಟ್ ಮಂಡಿಸಿದ್ದು ಇಲ್ಲಿಯವರೆಗೂ ಎಲ್ಲ ಹಣಕಾಸು ಸಚಿವರು ಆಂಗ್ಲ ಭಾಷೆಯಲ್ಲಿ ಆಯವ್ಯಯ ಮಂಡಿಸುತ್ತಿದ್ದರು. 2014ರಲ್ಲಿ ಅಸ್ತಿತ್ವಕ್ಕೆ ಬಂದ ಎನ್‌ಡಿಎ ಸರ್ಕಾರದ ವಿತ್ತ  ಸಚಿವ ಅರುಣ್ ಜೇಟ್ಲಿ ಇದೇ ಮೊದಲ ಬಾರಿಗೆ ಸಂಪ್ರದಾಯ ಬದಿಗೊತ್ತಿ ಹಿಂದಿಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿಂದೆ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದ ಜೇಟ್ಲಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು  ಹಿಂದಿಯಲ್ಲಿ ಮಂಡನೆ ಮಾಡಲಿದ್ದಾರೆ.
ಸಾಮಾನ್ಯರಿಗೆ ಅರ್ಥವಾಗುವ ಭಾಷೆ ಹಿಂದಿಯಾದ ಕಾರಣ ಹಿಂದಿಯಲ್ಲಿ ಭಾಷಣ ಮಂಡಿಸಿಲಿದ್ದಾರಂತೆ. ಆದರೆ ದಕ್ಷಿಣ ಭಾರತದ ಮಂದಿಗೆ ಹಿಂದಿ ಇಂದಿಗೂ ಕಬ್ಬಿಣದ ಕಡಲೆ. ಇದರ ಜೊತೆ ಫೆಬ್ರವರಿ 1ರಂದು  ಮಂಡನೆಯಾಗುತ್ತಿರುವುದು ಕೂಡ ನೂತನ ಸಂಪ್ರದಾಯ. ಹಲವು ವರ್ಷಗಳಿಂದ ಫೆಬ್ರವರಿ ಕೊನೆಯ ವಾರದಲ್ಲಿ ಕೇಂದ್ರ ಬಜೆಟ್‌ ಮಂಡಿಸಲಾಗುತ್ತಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT