ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2018: ಮೋದಿ ಸರ್ಕಾರದಿಂದ ಉದ್ಯೋಗ ಸೃಷ್ಟಿಗೆ ಒತ್ತು ಸಿಗಲಿದೆಯೇ?

2018ನೇ ಸಾಲಿನ ಕೇಂದ್ರ ಬಜೆಟ್ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ಪ್ರಮುಖವಾಗಿ ದೇಶದಲ್ಲಿ ಕೇಂದ್ರ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ ಎಂಬ ಆರೋಪಗಳೂ ಕೂಡ ಕೇಳಿಬಂದಿದೆ.

ನವದೆಹಲಿ: 2018ನೇ ಸಾಲಿನ ಕೇಂದ್ರ ಬಜೆಟ್ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು, ಪ್ರಮುಖವಾಗಿ ದೇಶದಲ್ಲಿ ಕೇಂದ್ರ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ ಎಂಬ ಆರೋಪಗಳೂ ಕೂಡ ಕೇಳಿಬಂದಿದೆ.
ಹೀಗಾಗಿ ಇಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸುತ್ತಿರುವ ಕೇಂದ್ರ ಬಜೆಟ್ ಉದ್ಯೋಗ ಸೃಷ್ಟಿಗೆ ಪೂರಕವಾಗಿರಲಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಪ್ರಮುಖವಾಗಿ ಉದ್ಯೋಗ ಸೃಷ್ಟಿಗೆ ಗರಿಷ್ಠ ಸಾಧ್ಯತೆ ಇರುವ  ವಲಯಗಳಲ್ಲಿ ಹೂಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ವಿತ್ತ ಸಚಿವ ಜೇಟ್ಲಿ ಚಿಂತಿಸಬೇಕಿದೆ. 
ನಿರ್ಮಾಣ ಮತ್ತು ರಿಯಲ್‌ ಎಸ್ಟೇಟ್‌ ದೇಶದ ಎರಡನೇ ಅತ್ಯಂತ ದೊಡ್ಡ ಉದ್ಯೋಗ ಸೃಷ್ಟಿಯ ವಲಯವಾಗಿದ್ದು, 2016ರ ನೋಟು ರದ್ದತಿಯ ನಂತರ ಈ ಕ್ಷೇತ್ರ ಹೆಚ್ಚು ಸಂಕಷ್ಟದಲ್ಲಿದೆ. ಪ್ರತಿ ವರ್ಷ ಒಂದು ಕೋಟಿ ಉದ್ಯೋಗ  ಸೃಷ್ಟಿಯಾಗಿದೆ ಎಂದು ಸರ್ಕಾರ ಹೇಳುತ್ತಿದೆಯಾದರೂ, 2014ರ ಬಳಿಕ ದೇಶದಲ್ಲಿ ಸೃಷ್ಟಿಯಾದ ಉದ್ಯೋಗಗಳ ಸಂಖ್ಯೆ ಸುಮಾರು  8.5 ಲಕ್ಷ ಎಂದು ಅಂಕಿ ಅಂಶಗಳು ಹೇಳುತ್ತಿವೆ.
ಇದಲ್ಲದೆ ಕೃಷಿ ಕ್ಷೇತ್ರ ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಒದಗಿಸಿದೆ. 2022ರ ಹೊತ್ತಿಗೆ ಕೃಷಿಕರ ಆದಾಯವನ್ನು ದುಪ್ಪಟ್ಟುಗೊಳಿಸುವುದು ಕೇಂದ್ರ ಸರ್ಕಾರದ ಕನಸಾಗಿದ್ದು. ಈ ವರ್ಷ (2016–17) ಕೃಷಿ ಕ್ಷೇತ್ರದ ಪ್ರಗತಿ  ಶೇ 2.1ಕ್ಕೆ ಇಳಿದಿದೆ. ಕಳೆದ ವರ್ಷ ಇದು ಶೇ 4ರಷ್ಟಿತ್ತು. ಬೇಸಾಯಕ್ಕೆ ಉತ್ತೇಜನ ನೀಡಲು ಜೇಟ್ಲಿ ಅವರು ಸಾಕಷ್ಟು ಹಣ ನೀಡಬೇಕಾಗುತ್ತದೆ. ನೀರಾವರಿ ಮತ್ತು ಬೆಳೆ ವಿಮೆಗೆ ಆದ್ಯತೆ ದೊರೆಯ ಬಹುದು ಎಂಬ ನಿರೀಕ್ಷೆ ಇದೆ. ಧಾನ್ಯ  ಸಂಗ್ರಹಕ್ಕೆ ಗೋದಾಮು ನಿರ್ಮಿಸುವವರಿಗೆ ಸಹಾಯಧನ ನೀಡುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT