ಬೆಂಗಳೂರು: 2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಪ್ರತಿ ಬಾರಿಯ ಬಜೆಟ್ ನಲ್ಲಿಯೂ ಹೊಸ ಯೋಜನೆಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಬೇಕಾದರೆ ಸರ್ಕಾರಕ್ಕೆ ಕಾಣಿಸುವುದು ಅಬಕಾರಿ ಇಲಾಖೆ ವ್ಯಾಪ್ತಿಗೆ ಬರುವ ಸಿಗರೇಟ್, ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗುತ್ತದೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಸಹ ಸಿಎಂ ಕುಮಾರಸ್ವಾಮಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದಾರೆ.
ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ್ದಾರೆ. ಇದರಿಂದ ಮದ್ಯಪ್ರಿಯರಿಗೆ ಹೆಚ್ಚಿನ ಹೊರ ಬೀಳಲಿದ್ದು, ಮದ್ಯ ಪ್ರಿಯರಿಗೆ ಸಿಎಂ ಈ ಬಾರಿಯೂ ಸಹ ಶಾಕ್ ನೀಡಿದ್ದಾರೆ.