ಬಜೆಟ್ ಮಂಡನೆಯಲ್ಲಿ ಕುಮಾರಸ್ವಾಮಿ 
ಕರ್ನಾಟಕ ಬಜೆಟ್

ರಾಜ್ಯ ಬಜೆಟ್ 2019: ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ನಿರೀಕ್ಷೆ: ಸಿಎಂ ಕುಮಾರಸ್ವಾಮಿ

2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: 2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಜಂಟಿ ಅಧಿವೇಶನದಲ್ಲಿ 2019ರ ರಾಜ್ಯ ಬಜೆಟ್‍ ಮಂಡಿಸಿದ ಅವರು, 2017-18ರಲ್ಲಿ ರಾಜ್ಯದ ಒಟ್ಟಾರೆ ಆಂತರಿಕ ಉತ್ಪನ್ನ ಬೆಳವಣಿಗೆ ಶೇ.10.4ರಷ್ಟಿತ್ತು. ಆದರೆ ಕೃಷಿ ಬೆಳವಣಿಗೆ ಇಳಿಕೆಯಿಂದಾಗಿ ಈ ವರ್ಷ ಆರ್ಥಿಕ ಬೆಳವಣಿಗೆ ಕುಂಠಿತವಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿನ ಮಳೆ ಅಭಾವದಿಂದಾಗಿ ಈ ಸಲ ಕೃಷಿ ಬೆಳವಣಿಗೆ ಶೇ.4.8ಕ್ಕೆ ಕುಸಿಯಬಹುದು. ಆದರೆ ಕೈಗಾರಿಕೆ ಮತ್ತು ಸೇವಾ ವಲಯ 2018-19ರಲ್ಲಿ ಕ್ರಮವಾಗಿ ಶೇ.7.4 ಮತ್ತು ಶೇ.12.3ರಷ್ಟು ಪ್ರಗತಿ ಸಾಧಿಸಲಿವೆ. ಕಳೆದ ವರ್ಷ ಈ ಪ್ರಮಾಣ ಶೇ. 4.7 ಮತ್ತು ಶೇ.12.2ರಷ್ಟಿತ್ತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ವೇಳೆ ಕುಮಾರಸ್ವಾಮಿ ಅವರು ನೀರಾವರಿಗೆ 17, 202 ಕೋಟಿ ರೂ ಅನುದಾನ ಮೀಸಲಿರಿಸಿದ್ದು, ಕೃಷಿ ಸಂಬಂಧಿತ ಚಟುವಟಿಕೆಗಳಿಗೆ 46, 850 ಕೋಟಿ ರೂಗಳನ್ನು ಮೀಸಲಿಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
2,34,153 ಕೋಟಿ ರೂ. ಗಾತ್ರದ ಕರ್ನಾಟಕ ಬಜೆಟ್ ಮಂಡನೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2019-20ನೇ ಸಾಲಿನಲ್ಲಿ ಒಟ್ಟು 2,34,153 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ.  ಈ ಸಾಲಿನಲ್ಲಿ ಸರ್ಕಾರದ ಒಟ್ಟಾರೆ ಸ್ವೀಕೃತಿ 2,30,738 ಕೋಟಿ ರೂ. ಆಗಿದ್ದು, 1,81,863 ಕೋಟಿ ರೂ. ಆದಾಯ ಸಂಗ್ರಹ ನಿರೀಕ್ಷೆಯಿದೆ. 48,601 ಕೋಟಿ ರೂ. ಸಾರ್ವಜನಿಕ ಸಾಲ, 48,876 ಕೋಟಿ ರೂ. ಬಂಡವಾಳ ಹೂಡಿಕೆ ಅಂದಾಜಿಸಲಾಗಿದೆ. ಕೃಷಿ ಸಾಲ ಮನ್ನಾಕ್ಕೆ 6500 ಕೋಟಿ ರೂ. ಮೀಸಲಿಡಲಾಗಿದ್ದು, ಕೃಷಿ ಮತ್ತು ಸಂಬಂಧಿತ ಕ್ಷೇತ್ರಕ್ಕೆ 46,853 ಕೋಟಿ ರೂ. ಅನುದಾನ ನೀಡಲಾಗಿದೆ.  ಜಿಎಸ್ಟಿ ಅಡಿಯಲ್ಲಿ 76,406 ಕೋಟಿ ರೂ. ತೆರಿಗೆ ಸಂಗ್ರಹ ನಿರೀಕ್ಷಿತ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT