ಕರ್ನಾಟಕ ಬಜೆಟ್ 2019: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂ. ಮೀಸಲು ನಿಗದಿ 
ಕರ್ನಾಟಕ ಬಜೆಟ್

ಕರ್ನಾಟಕ ಬಜೆಟ್ 2019: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂ. ಮೀಸಲು ನಿಗದಿ

ಕನ್ನಡ ಸಂಸ್ಕೃತಿ, ಪರಂಪರೆಯ ಸಂರಕ್ಷಣೆಯ ಸಲುವಾಗಿ, ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುವಾಗುವಂತೆ....

ಬೆಂಗಳೂರು: ಕನ್ನಡ ಸಂಸ್ಕೃತಿ, ಪರಂಪರೆಯ ಸಂರಕ್ಷಣೆಯ ಸಲುವಾಗಿ, ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುವಾಗುವಂತೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 5 ಕೋಟಿ ರೂ., ಮೀಸಲಿಡಲಾಗಿದೆ.
ಅಂತೆಯೇ ಕೊಡವ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ 10 ಕೋಟಿ ರೂ., ಜಗದ್ಗುರು ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಠದ ವತಿಯಿಂದ ಮೈಸೂರಿನಲ್ಲಿ ಕರಕುಶಲಕರ್ಮಿಗಳಿಗೆ ‘ಅರ್ಬನ್ ಹಾತ್’ ವ್ಯವಸ್ಥಿತ ಸೌಲಭ್ಯ ಹಾಗೂ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
“ಜಾನಪದ ಜಾತ್ರೆ”ಗೆ ಮರುಜೀವ
ರಾಜ್ಯದ ಜಾನಪದ ಕಲಾವಿದರು ಹಾಗೂ ಕಲೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ “ಜಾನಪದ ಜಾತ್ರೆ” ಕಾರ್ಯಕ್ರಮಕ್ಕೆ ಮರುಚಾಲನೆ ನೀಡಲು ಸರ್ಕಾರ ಉದ್ದೇಶಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾನಪದ ಜಾತ್ರೆ ಏರ್ಪಡಿಸಲು 2 ಕೋಟಿ ರೂ. ಅನುದಾನ ಘೋಷಿಸಲಾಗಿದೆ.
ಹಾಸ್ಯ ಚಕ್ರವರ್ತಿ, ದಿವಂಗತ ನಟ ನರಸಿಂಹರಾಜು ಅವರ ಹೆಸರಿನಲ್ಲಿ ತಿಪಟೂರಿನಲ್ಲಿ ಸ್ಮಾರಕ ಸಭಾಮಂದಿರ ನಿರ್ಮಿಸಲು 2019-20ನೇ ಸಾಲಿನ ಬಜೆಟ್ ನಲ್ಲಿ 2 ಕೋಟಿ ರೂ. ಪ್ರಕಟಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರಿನ ವೀರಭದ್ರೇಶ್ವರ ಚಾರಿಟಬಲ್ ಟ್ರಸ್ಟ್ ಗೆ 1 ಕೋಟಿ, ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಚಟುವಟಿಕೆಗಳ ಕಾರ್ಯನಿರ್ವಹಣೆಗೆ 1 ಕೋಟಿ ರೂ., ಮಂಡ್ಯದ ಕರ್ನಾಟಕ ಸಂಘದ ಅಭಿವೃದ್ಧಿಗೆ 1 ಕೋಟಿ ರೂ., ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಆದಿಶಕ್ತಿ ಮಾತೆಯರ ವೃದ್ಧಾಶ್ರಮ ಅಭಿವೃದ್ಧಿಗೆ 2 ಕೋಟಿ ರೂ. ಕರಗ ಉತ್ಸವ ಆಚರಿಸುವ 139 ಸಂಘ, ಸಂಸ್ಥೆಗಳಿಗೆ 2 ಕೋಟಿ ರೂ. ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT