ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ಕರ್ನಾಟಕ ಬಜೆಟ್

ಕರ್ನಾಟಕ ಬಜೆಟ್ 2019: ಮೀನುಗಾರಿಕೆ ಕ್ಷೇತ್ರ, ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಮೀನುಗಾರಿಕೆ ದೋಣಿಗಳಿಗೆ ಇಸ್ರೋ ಅಧಿಕೃತಗೊಳಿಸಿರುವ ಡಿಎಟಿ ಉಪಕರಣ ಅಳವಡಿಸಿಕೊಳ್ಳಲು ಶೇ. 50 ರಷ್ಟು ಸಹಾಯಧನ, 3 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಒಳನಾಡು ಮತ್ತು ಹಿನ್ನೀರು ಜಲಸಂಪನ್ಮೂಲದಲ್ಲಿ ಸಿಗಡಿ ಮತ್ತು ಮೀನು ಕೃಷಿಗೆ ಪ್ರೋತ್ಸಾಹ. 400 ಘಟಕಗಳಿಗೆ ಸಹಾಯಧನ ನೀಡಲು 2 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಒಳನಾಡಿನ ಕೆರೆಗಳಲ್ಲಿನ ಮೀನುಗಾರಿಕೆ ಗುತ್ತಿಗೆಗಳನ್ನು ಸಂಘ ಸಂಸ್ಥೆಗಳ ಬದಲು ಸ್ಥಳೀಯ ಮೀನುಗಾರರಿಗೆ ಮೀಸಲಿಡುವ ಕುರಿತು ಪರಿಶೀಲಿಸುವುದಾಗಿ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ಮತ್ಸ್ಯಾಶ್ರಯ ಯೋಜನೆಯಜಿ ಪ್ರಗತಿಯಲ್ಲಿರುವ 2500 ಮನೆಗಳನ್ನು ಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನುಗಾರಿಕೆ ಚಟುವಟಿಕೆಗಳ ಅಭಿವೃದ್ಧಿಗೆ ಜೆಟ್ಟಿ ನಿರ್ಮಾಣ, ತ್ಯಾಜ್ಯ ನಿರ್ವಹಣಾ ಘಟಕಕ್ಕಾಗಿ 15 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

ರಾಜ್ಯದಲ್ಲಿ ಡೀಸೆಲ್ ಮತ್ತು ಸೀಮೆಎಣ್ಣೆ ಪಾಸ್ ಬುಕ್ ಪಡೆದಿರುವ ದೋಣಿಗಳಿಗೆ ಡೀಸೆಲ್, ಸೀಮೆಎಣ್ಣೆ ಸಬ್ಸಿಡಿಗಾಗಿ 148.5 ಕೋಟಿ ಮೀಸಲಿರಿಸುವ ಪ್ರಸ್ತಾಪವನ್ನು ಬಜೆಟ್ ನಲ್ಲಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT