ಮಮತಾ ಬ್ಯಾನರ್ಜಿ 
ಕೇಂದ್ರ ಬಜೆಟ್

ಸರ್ಕಾರದ ಅವಧಿ ಮುಗಿಯುತ್ತಿರುವಾಗ ಮಧ್ಯಂತರ ಬಜೆಟ್ ಗೆ ಯಾವುದೇ ಮಹತ್ವವಿಲ್ಲ: ಮಮತಾ ಬ್ಯಾನರ್ಜಿ

ಶುಕ್ರವಾರ ಕೇಂದ್ರದ ಎನ್ ಡಿಎ ಸರ್ಕಾರ ಮಂಡಿಸಿದ ಮದ್ಯಂತರ ಬಜೆಟ್ ಗೆ ಯಾವ ಮಹತ್ವವಿಲ್ಲ . ಕೇಂದ್ರ ಸರ್ಕಾರದ ಅವಧಿ ಶೀಘ್ರವೇ ಮುಗಿಯಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ....

ಕೋಲ್ಕತ್ತಾ: ಶುಕ್ರವಾರ ಕೇಂದ್ರದ ಎನ್ ಡಿಎ ಸರ್ಕಾರ ಮಂಡಿಸಿದ ಮದ್ಯಂತರ ಬಜೆಟ್ ಗೆ ಯಾವ ಮಹತ್ವವಿಲ್ಲ. ಕೇಂದ್ರ ಸರ್ಕಾರದ ಅವಧಿ ಶೀಘ್ರವೇ ಮುಗಿಯಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ..
"ಇದನ್ನು(ಮಧ್ಯಂತರ ಬಜೆಟ್) ಯಾರು ಕಾರ್ಯಗತಗೊಳಿಸಲಿದ್ದಾರೆ? ಈ ಬಜೆಟ್ ಅನ್ನು ಕಾರ್ಯರೂಪಕ್ಕೆ ತರಲು ಹೊಸ ಸರಕಾರ ಬರುತ್ತದೆಯೇ? ಚುನಾವಣೆ ಹೊಸ್ತಿಲಲ್ಲಿರುವಾಗ ಈ ಬಜೆಟ್ ಗೆ ಯಾವ ಮೌಲ್ಯವಿಲ್ಲ. ಇದು ಕೇವಲ ಚುನಾವಣೆ ಬಜೆಟ್ "ಮಮತಾ ಹೇಳಿದ್ದಾರೆ.
"ಈ ಸರ್ಕಾರಕ್ಕೆ ನೈತಿಕ ಅಧಿಕಾರ ಅಥವಾ ಜವಾಬ್ದಾರಿ ಇಲ್ಲ. 5 ವರ್ಷ ಬಜೆಟ್ ಮಂಡಿಸುವಾಗಿಲ್ಲದ ಕಾಳಜಿ ಇದೀಗ ತೋರಿದರೆ ಏನು ಪ್ರಯೋಜನ?ಅವಧಿ ಮುಗಿಯುವವರೆಗೆ ಸರ್ಕಾರ ಇರಲಿದೆ.ನೀವು ಅವಧಿ ಮುಗಿದ ನಂತರ ಔಷಧಿಯನ್ನು ಕೊಟ್ಟರೆ, ಯಾವುದೇ ಉಪಯೋಗವಿದೆಯೆ? ಒಮ್ಮೆ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿದ ಬಳಿಕ ಈ ಬಜೆಟ್ ನ ಯಾವ ಯೋಜನೆಗಳ ಅನುಷ್ಠಾನ ಸಾಧ್ಯವಾಗದು. ಹಾಗಾಗಿ ಈ ಮದ್ಯಂತರ ಬಜೆಟ್ ಗೆ ಯಾವುದೇ ಮಹತ್ವವಿಲ್ಲ" ಅವರು ಹೇಳಿದರು.
"ಅಂತಹ (ಬಜೆಟ್) ಘೋಷಣೆ ಮಾಡಲು ಬಿಜೆಪಿ ಸರ್ಕಾರಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಅವರು ರೈತರಿಗಾಗಿ ಒಂದೇ ಒಂದು ಉತ್ತಮ ಯೋಜನೆಯನ್ನೂ ಏಕೆ ಘೋಷಣೆ ಮಾಡಿಲ್ಲ?" ಪ್ರಸಕ್ತ ಬಜೆಟ್ ನಲ್ಲಿನ ಬಡ ರೈತರ ಪರ ಯೋಜನೆಯನ್ನು ಉಲ್ಲೇಖಿಸಿ ಮಮತಾ ಮಾತನಾಡಿದ್ದಾರೆ.ಅಪನಗದೀಕರಣ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿ ಬಳಿಕ ದೇಶವು ತುರ್ತು ಪರಿಸ್ಥಿತಿಯಂತಹಾ ಕಾಲಘಟ್ಟವನ್ನು ಹಾದು ಹೋಗುತ್ತಿದೆ ಎಂದು ಪ. ಬಂಗಾಳ ಮುಖ್ಯಮಂತ್ರಿ ಆರೋಪಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT