ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 
ಕೇಂದ್ರ ಬಜೆಟ್

ಬಜೆಟ್ ಮೂಲಕ ರೈತರಿಗೆ ಪ್ರಧಾನಿ ಮೋದಿ 'ಕಾಟನ್ ಕ್ಯಾಂಡಿ' ಕೊಟ್ಟಿದ್ದಾರೆ: ಸಿಎಂ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ 2019-20 ನೇ ಸಾಲಿನ ಬಜೆಟ್ ನಲ್ಲಿ ರೈತರಿಗೆ ಪ್ರಧಾನಿ ಮೋದಿ ರೈತರಿಗೆ ಕಾಟನ್ ಕ್ಯಾಂಡಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ರೈತರ ಸಾಲ ಮನ್ನಾ  ಯೋಜನೆ ಜಾರಿಯಾದಾಗ ಲಾಲಿಪಪ್ ಎಂದು ವ್ಯಂಗ್ಯವಾಡಿದ್ದ   ಪ್ರಧಾನಿ ನರೇಂದ್ರ ಮೋದಿ 2019-20 ನೇ ಸಾಲಿನ  ಬಜೆಟ್ ನಲ್ಲಿ ರೈತರಿಗೆ ಪ್ರಧಾನಿ ಮೋದಿ  ರೈತರಿಗೆ ಕಾಟನ್ ಕ್ಯಾಂಡಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ 2019-20 ನೇ ಸಾಲಿನ ಕೇಂದ್ರ ಬಜೆಟ್ ಸಂಪೂರ್ಣ ವಿಫಲವಾಗಿದ್ದು, ನಿರಾಶದಾಯಕ ಬಜೆಟ್ ಆಗಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿವರ್ಷ  ರೈತರ ಖಾತೆಗೆ 6 ಸಾವಿರ  ರೂ. ನೇರ ನಗದು  ವರ್ಗಾವಣೆ ಮಾಡುವುದಾಗಿ ಹೇಳಲಾಗಿದೆ. ಆದರೆ, ಇದರಿಂದ ಎಷ್ಟು ಜನರಿಗೆ ಅನುಕೂಲವಾಗುತ್ತದೆಯೋ ಗೊತ್ತಿಲ್ಲ,5 ರೂ. ಲಕ್ಷವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ. ಇದನ್ನು ಕಳೆದ ಐದು ವರ್ಷಗಳಿಂದಲೂ ನಿರೀಕ್ಷಿಸಲಾಗಿತ್ತು ಎಂದರು.

ಹೊಸ  ರೈಲ್ವೆ ಬಜೆಟ್ ನಲ್ಲಿ ಸಬರನ್ ರೈಲು ಯೋಜನೆಗೆ ಒಪ್ಪಿಗೆ ನೀಡಿಲ್ಲ. ತಾತ್ಕಾಲಿಕವಾದರೂ ಜನರನ್ನು ಮೆಚ್ಚಿಸುವ ನಿರೀಕ್ಷೆಯಿತ್ತು. ಆದರೆ, ಅದು ಆಗಿಲ್ಲ. ಮಹಾತ್ಮಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಮತ್ತಿತರ ಯಾವುದೇ ಹೊಸ ಯೋಜನೆಗಳ ಪ್ರಸ್ತಾಪ ಇಲ್ಲ ಎಂದು  ಕುಮಾರಸ್ವಾಮಿ ಹೇಳಿದರು.

ಇದು  ಹಣಕಾಸು ಇಲಾಖೆ ಸಿಬ್ಬಂದಿಗಳು ತಯಾರಿಸಿರುವ ಬಜೆಟಾ ? ಅಥವಾ ಆರ್ ಎಸ್ ಎಸ್, ಬಿಜೆಪಿಯ ಸ್ನೇಹಿತರು ರೂಪಿಸಿರುವ ಬಜೆಟಾ? ಎಂದು ಕೇಳಲು ಬಯಸುವುದಾಗಿ ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್ 2026-27: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ, ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!

'ಕ್ಯಾಚ್ ಡ್ರಾಪ್, ರನೌಟ್ ಕೂಡ ಮಿಸ್': ಒಂದೇ ಎಸೆತದಲ್ಲಿ Vaibhav Suryavanshiಗೆ 2 ಬಾರಿ ಜೀವದಾನ, ನಗೆಪಾಟಲಿಗೀಡಾದ ಪಾಕ್ ಫೀಲ್ಡಿಂಗ್! Video

80 Pak ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್‌ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!

SCROLL FOR NEXT