ಸಾಂದರ್ಭಿಕ ಚಿತ್ರ 
ಕೇಂದ್ರ ಬಜೆಟ್

ಫೆಬ್ರವರಿ 1ರ ಮಧ್ಯಂತರ ಬಜೆಟ್: ಸರ್ಕಾರದಿಂದ ಆದಾಯ ತೆರಿಗೆ ವಿನಾಯ್ತಿ ನಿರೀಕ್ಷೆ

ಲೋಕಸಭೆ ಚುನಾವಣೆಗೆ ಇನ್ನು ಇರುವುದು ಕೇವಲ ಮೂರು ತಿಂಗಳು. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ....

ನವದೆಹಲಿ: ಲೋಕಸಭೆ ಚುನಾವಣೆಗೆ ಇನ್ನು ಇರುವುದು ಕೇವಲ ಮೂರು ತಿಂಗಳು. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಮಧ್ಯಂತರ ಬಜೆಟ್ ಮೇಲೆಯೇ ಎಲ್ಲರ ಕಣ್ಣು. ಚುನಾವಣೆ ಹೊಸ್ತಿಲಲ್ಲಿ ಇದು ಸಾಮಾನ್ಯವಾಗಿ ಮತದಾರರನ್ನು ಓಲೈಕೆ ಮಾಡುವ ಬಜೆಟ್ ಆಗಿರುತ್ತದೆ.

ಮಧ್ಯಮ ವರ್ಗದ ವೇತನದಾರ ಮತದಾರರನ್ನು ಸೆಳೆಯಲು ಮೋದಿ ನೇತೃತ್ವದ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ವಿನಾಯ್ತಿ ನೀಡುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಚುನಾವಣೆ ಹೊಸ್ತಿಲಿನಲ್ಲಿರುವಾಗ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುತ್ತದೆಂದು ಸರ್ಕಾರಗಳು ಮಧ್ಯಂತರ ಬಜೆಟ್ ನಲ್ಲಿ ತೆರಿಗೆ ವಿನಾಯ್ತಿ ಘೋಷಿಸುವುದಿಲ್ಲ. ಆದರೆ ಅರುಣ್ ಜೇಟ್ಲಿಯವರು ಮಂಡಿಸುತ್ತಿರುವ ಫೆಬ್ರವರಿ 1ರ ಮಧ್ಯಂತರ ಬಜೆಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದಿಲ್ಲ. ಹೀಗಾಗಿ ಮತದಾರರನ್ನು ಗಮನದಲ್ಲಿಟ್ಟುಕೊಂಡು, ವೇತನ ವರ್ಗದವರಿಗೆ ಹೆಚ್ಚಿನ ಆದಾಯ ತೆರಿಗೆ ವಿನಾಯ್ತಿಯನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ವೋಟ್ ಆನ್ ಅಕೌಂಟ್ ಗೆ ಅನುಮತಿ ಕೇಳುವ ಸಾಧ್ಯತೆಯಿದೆ. ಅಂದರೆ ಹಣದ ವೆಚ್ಚಕ್ಕೆ ಸರ್ಕಾರಕ್ಕೆ ಸಂಸತ್ತು ಮಧ್ಯಂತರ ಅನುಮತಿ ನೀಡುವುದು. ಪೂರ್ಣ ಪ್ರಮಾಣದ ಬಜೆಟ್ ಗೆ ಬದಲಾಗಿ ಸರ್ಕಾರದ ನೀತಿಗಳು, ಯೋಜನೆಗಳು ಮತ್ತು ತೆರಿಗೆಗಳಿಗೆ ಹಣ ಖರ್ಚು ಮಾಡಲು ಪಡೆಯುವ ಮಧ್ಯಂತರ ಅನುಮತಿಯಾಗಿದೆ. ಇದು ಕೇವಲ 2 ತಿಂಗಳ ಮೌಲ್ಯವನ್ನು ಹೊಂದಿರುತ್ತದೆ.

ಬಜೆಟ್ ಗೆ ಮುನ್ನ ಕೇಂದ್ರ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿರುವ ಕೈಗಾರಿಕಾ ಮಂಡಳಿ, 5 ಲಕ್ಷದವರೆಗೆ, 80ಸಿಯಡಿ ಕಡಿತ ಮಿತಿಯನ್ನು ಹೆಚ್ಚಿಸಿ 2.5 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿಯನ್ನು ನೀಡಿ ಉಳಿತಾಯವನ್ನು ಹೆಚ್ಚಿಸಬೇಕೆಂದು ಕೋರಿದೆ.

ಮಧ್ಯಂತರ ಬಜೆಟ್ ನ ಅವಧಿ ಕೇವಲ 4 ತಿಂಗಳು ಇರುವುದರಿಂದ ನೂತನ ಸರ್ಕಾರ ಜುಲೈಯಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಸರ್ಕಾರದ ಆರ್ಥಿಕ ಸಮೀಕ್ಷೆ ಕೂಡ ಅಂದೇ ಮಂಡನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT