ಕೇಂದ್ರ ಬಜೆಟ್

ಬಜೆಟ್ ಮಂಡನೆ ಹಿನ್ನೆಲೆ, ರಾಷ್ಟ್ರಪತಿ ಭೇಟಿಯಾದ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.

ನವದೆಹಲಿ: ಕೇಂದ್ರ ಸರ್ಕಾರದ  ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಸಂಪ್ರದಾಯದಂತೆ ಬಜೆಟ್ ಮಂಡನೆಗೂ ಮುನ್ನ ಸಚಿವೆ  ನಿರ್ಮಲಾ ಸೀತಾರಾಮನ್ ಅವರನ್ನು  ರಾಷ್ಟ್ರಪತಿ ಭವನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಹ್ವಾನಿಸಿದ್ದರು ಎಂದರು ರಾಷ್ಟ್ರಪತಿ ಭವನದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.
ನಿರ್ಮಲಾ ಸೀತಾರಾಮನ್ ಜೊತೆಗೆ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಗೂರ್ ಮತ್ತಿತರರು ಉಪಸ್ಥಿತರಿದ್ದರು.  ನರೇಂದ್ರ ಮೋದಿ 2.0 ಸರ್ಕಾರದ ಬಜೆಟ್ ನ್ನು ಕೆಲ ಹೊತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸ್ವಾತಂತ್ರ್ಯ ನಂತರ ಇಂದಿರಾಗಾಂಧಿ ನಂತರ ಎರಡನೇ ಮಹಿಳೆಯಾಗಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.
ಇದು 89ನೇ ಕೇಂದ್ರ ಬಜೆಟ್ ಆಗಿದ್ದು, ಸರ್ಕಾರದ ಹಣಕಾಸಿನ ಪರಿಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತದೆ. ಆದಾಯ ಹಾಗೂ ಮುಂದಿನ ವರ್ಷ  ಮಾಡಲಾಗುವ ವೆಚ್ಚದ ಅಂದಾಜು ಆಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT