ಕೇಂದ್ರ ಬಜೆಟ್

ಕೇಂದ್ರ ಬಜೆಟ್ ನಲ್ಲಿ ಚಿಲ್ಲರೆ ವ್ಯಾಪಾರಿಗಳಿಗೆ ಸಿಕ್ಕ ಯೋಜನೆ ಇದು, ಫಲಾನುಭವಿಗಳಾಗಲು ಮಾಡಬೇಕಿರುವುದೇನು?

ಕೇಂದ್ರ ಬಜೆಟ್ ನಲ್ಲಿ ಚಿಲ್ಲರೆ ವ್ಯಾಪಾರಿಗಳಿಗೆ ಪ್ರಯೋಜನವಾಗುವ ಯೋಜನೆಯನ್ನು ಘೋಷಿಸಲಾಗಿದೆ. ಪ್ರಧಾನಮಂತ್ರಿ ಕರ್ಮ ಯೋಗಿ ಮಾನ್ ಧನ್ ಯೋಜನೆಯನ್ನು ಈ ಬಜೆಟ್ ನಲ್ಲಿ ಚಿಲ್ಲರೇ ವ್ಯಾಪಾರಿಗಳಿಗೂ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಚಿಲ್ಲರೆ ವ್ಯಾಪಾರಿಗಳಿಗೆ ಪ್ರಯೋಜನವಾಗುವ ಯೋಜನೆಯನ್ನು ಘೋಷಿಸಲಾಗಿದೆ. ಪ್ರಧಾನಮಂತ್ರಿ ಕರ್ಮ ಯೋಗಿ ಮಾನ್ ಧನ್ ಯೋಜನೆಯನ್ನು ಈ ಬಜೆಟ್ ನಲ್ಲಿ ಚಿಲ್ಲರೇ ವ್ಯಾಪಾರಿಗಳಿಗೂ ವಿಸ್ತರಿಸಲಾಗಿದೆ. 
ಈ ಯೋಜನೆ ವಾರ್ಷಿಕ 1.5 ಕೋಟಿಗಿಂತಲೂ ಕಡಿಮೆ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಅನ್ವಯವಾಗಲಿದ್ದು, 3 ಕೋಟಿ ವ್ಯಾಪಾರಿಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದೆ.  
ಈ ಯೋಜನೆಯಿಂದಾಗಿ 60 ವರ್ಷ ವಯಸ್ಸಿನ ವ್ಯಾಪಾರಿಗಳಿಗೆ ತಿಂಗಳಿಗೆ 3,000 ರೂಪಾಯಿ ಪಿಂಚಣಿ ದೊರೆಯಲಿದೆ. ಬ್ಯಾಂಕ್ ಖಾತೆಯ ವಿವರ ಹಾಗೂ 12 ಸಂಖ್ಯೆಗಳ ಆಧಾರ್ ಕಾರ್ಡ್ ನ್ನು ನೀಡುವ ಮೂಲಕ ಈ ಯೋಜನೆಯ ಫಲಾನುಭವಿಗಳಾಗಬಹುದಾಗಿದೆ.  
ಫಲಾನುಭವಿಗಳು ಹೂಡಿಕೆ ಮಾಡಿದ್ದ ಹಣದಷ್ಟೇ ಮೊತ್ತವನ್ನು ಕೇಂದ್ರ ಸರ್ಕಾರ ಸಹ ನೀಡಲಿದ್ದು 50:50 ಅನುಪಾತದಲ್ಲಿ ಪಿಂಚಣಿ ಮೊತ್ತ ದೊರೆಯಲಿದೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಹೊಸ ವ್ಯಾಪಾರಿಗಳು ಈ ಯೋಜನೆಯ ಭಾಗವಾಗುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT