ರಾಜ್ಯ ಬಜೆಟ್ ಮಂಡನೆ ಇತಿಹಾಸ: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊದಲ ಸ್ಥಾನ! 
ಬಜೆಟ್ 2020

ರಾಜ್ಯ ಬಜೆಟ್ ಮಂಡನೆ ಇತಿಹಾಸ: ಮಾಜಿ ಸಿಎಂ ರಾಮಕೃಷ್ಣ ಹೆಗಡೆಗೆ ಮೊದಲ ಸ್ಥಾನ!

ಕಳೆದ 1956ರಿಂದ ಇಲ್ಲಿಯ ವರೆಗೆ ಮಧ್ಯಂತರ ಬಜೆಟ್ ಮಂಡನೆ ಸೇರಿದಂತೆ ರಾಜ್ಯದಲ್ಲಿ ಈ ವರೆಗೆ ಒಟ್ಟು 65 ಬಜೆಟ್ ಗಳನ್ನು ಮಂಡಿಸಲಾಗಿದೆ. 

ಬೆಂಗಳೂರು: ಕಳೆದ 1956ರಿಂದ ಇಲ್ಲಿಯ ವರೆಗೆ ಮಧ್ಯಂತರ ಬಜೆಟ್ ಮಂಡನೆ ಸೇರಿದಂತೆ ರಾಜ್ಯದಲ್ಲಿ ಈ ವರೆಗೆ ಒಟ್ಟು 65 ಬಜೆಟ್ ಗಳನ್ನು ಮಂಡಿಸಲಾಗಿದೆ. 
  
ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿದ ಅಪರೂಪದ ಕೀರ್ತಿ ಮತ್ತು ಹೆಗ್ಗಳಿಕೆಗೆ ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಭಾಜನರಾಗಿದ್ದಾರೆ. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ವಿಷಯ ಪರಿಣಿತರಾಗಿದ್ದ ಅವರು, ಈವರೆಗೆ 13 ಬಜೆಟ್ ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಅವರ ರಾಜಕೀಯ ಶಿಷ್ಯ ಎಂದೇ ಗುರುತಿಸಿಕೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 13 ಬಜೆಟ್ಟ ಗಳನ್ನು ಮಂಡಿಸಿ ಗುರುವಿನ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಿದ್ದರಾಮಯ್ಯ ಹಣಕಾಸು ಮತ್ತು ಉಪಮುಖ್ಯಮಂತ್ರಿಯಾಗಿ ಏಳು ಬಜೆಟ್, ಮುಖ್ಯಮಂತ್ರಿಯಾಗಿ 6 ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. 
  
ರಾಜ್ಯದ ರಾಜ್ಯಪಾಲರಾಗಿರುವ ವಜೂಬಾಯಿ ವಾಲಾ ಅವರು ಗುಜರಾತ್ ರಾಜ್ಯದ ಹಣಕಾಸು ಸಚಿವರಾಗಿ 18 ಬಜೆಟ್ ಮಂಡಿಸಿದ್ದಾರೆ.

ಏಳು ತಿಂಗಳು… ಏಳನೇ ಬಜೆಟ್ ಮಂಡನೆ…. !!!
  
ಕಳೆದ ಜುಲೈನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ 7 ತಿಂಗಳ ಅವಧಿ ಪೂರೈಸಿದ್ದಾರೆ. ಕಾಕತಾಳೀಯವೋ ಏನೋ ಎಂಬಂತೆ ಇಂದು ಏಳನೇ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತು, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಅವರು ಇಂದು ಏಳನೇ ಬಜೆಟ್ ಮಂಡನೆ ಮಾಡಿದ್ದಾರೆ.
  
ಇನ್ನೊಂದು ವಿಶೇಷ ಎಂದರೆ ಹಳೆಯ ಮೈಸೂರು ಭಾಗದಿಂದ ಬಜೆಟ್ ಮಂಡನೆ ಮಾಡಿದ ರಾಜಕೀಯ ನಾಯಕರ ಪೈಕಿ ಯಡಿಯೂರಪ್ಪ ಅವರು 32ನೇ ಹಣಕಾಸು ಸಚಿವರಾಗಿದ್ದಾರೆ.
  
ಎಸ್.ಎಂ ಕೃಷ್ಣ, ಮರಿಯಪ್ಪ, ಎಚ್.ಡಿ ದೇವೇಗೌಡ, ಬಿ.ಡಿ ಜತ್ತಿ,ನಿಜಲಿಂಗಪ್ಪ, ಮೊದಲಾದವರು ಸೇರಿದಂತೆ ಹಳೆಯ ಮೈಸೂರು ಭಾಗಕ್ಕೆ ಸೇರಿದ ನಾಯಕರಾಗಿದ್ದಾರೆ. ಕಳೆದ ಜುಲೈ 26 ರಂದು ಬಿಎಸ್ ಯಡಿಯೂರಪ್ಪ 4ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಮೊಟ್ಟ ಮೊದಲ ಕೃಷಿ ಬಜೆಟ್ ಮಂಡನೆ ಮಾಡಿದ ಕೀರ್ತಿ ಮತ್ತು ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT