ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ಮಕ್ಕಳಿಗಾಗಿ ವಿಶೇಷ ಬಜೆಟ್: ಇದೇ ಮೊದಲ ಬಾರಿಗೆ ಮಕ್ಕಳಿಗಾಗಿ ರೂ.36,340 ಕೋಟಿ ಮೀಸಲಿಟ್ಟ ಸರ್ಕಾರ

2020-21ನೇ ಸಾಲಿನ ಆಯವ್ಯಯ ಮಂಡನೆ ಮಾಡಿರುವ ಯಡಿಯೂರಪ್ಪ ಅವರು, ಈ ಬಾರಿ ಮಕ್ಕಳಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದಾರೆ. 

ಬೆಂಗಳೂರು: 2020-21ನೇ ಸಾಲಿನ ಆಯವ್ಯಯ ಮಂಡನೆ ಮಾಡಿರುವ ಯಡಿಯೂರಪ್ಪ ಅವರು, ಈ ಬಾರಿ ಮಕ್ಕಳಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದಾರೆ. 

ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಮಕ್ಕಲಿಗಾಗಿ ಬಜೆಟ್ನಲ್ಲಿ ರೂ.36,340 ಕೋಟಿ ಮೀಸಲಿಟ್ಟಿದ್ದು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಶೇ.15ರಷ್ಟು ಹಣ ಮೀಸಲಿಟ್ಟಿದೆ. 

ಬಜೆಟ್ ಮಂಡನೆ ವೇಳೆ ಮಕ್ಕಳ ಅಭಿವೃದ್ಧಿಗಾಗಿ ಬದ್ಧರಾಗಿರುವುದಾಗಿ ತಿಳಿಸಿದ ಯಡಿಯೂರಪ್ಪ ಅವರು, ಬಜೆಟ್ ನಲ್ಲಿ ಮಕ್ಕಳಿಗೆ ವಿಶೇಷ ಯೋಜನೆ ರೂಪಿಸಿದ್ದಾರೆ. ಪ್ರತೀ ತಿಂಗಳ ಎರಡು ಶನಿವಾರ ಬ್ಯಾಗ್ ರಹಿತ ಸಂಭ್ರಮ ಶನಿವಾರವಾಗಿ ಘೋಷಣೆ ಮಾಡಿದ್ದಾರೆ. 

ಈ ಮೂಲಕ ಮಕ್ಕಳಲ್ಲಿ ಕಲಿಕೆಯ ಉತ್ಸಾಹ ಹೆಚ್ಚಿಸುವ ಸಲುವಾಗಿ ಬರುವ ಶೈಕ್ಷಣಿಕ ವರ್ಷದಿಂದ ಬ್ಯಾಗ್ ಲೆಸ್ ಡೇ ಜಾರಿಗೆ ತರುವ ಶಿಕ್ಷಣ ಸಚಿವರ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ.

ಸಂಭ್ರಮದ ಶನಿವಾರ ಮಕ್ಕಳಿಗೆ ಕೇವಲ ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ, ಅವರಿಗೆ ಕಲಿಕೆ ಮೇಲೆ ಆಸಕ್ತಿ ಮೂಡಿಸಲಾಗುವುದು ಎಂದಿದ್ದಾರೆ. ಇದೇ ವೇಳೆ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮವನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. 

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದ ಅವರು, ಕಲಿಕೆಗೆ ಸಹಾಯವಾಗಲು ಶಿಕ್ಷಕರಿಗೆ ಎಲ್ಲಾ ಸೇವಾ ಸೌಲಭ್ಯಗಲನ್ನು ಅಂತರ್ಜಾಲದ ಮೂಲಕ ಒದಗಿಸಲು ಶಿಕ್ಷಕ ಮಿತ್ರ ಆ್ಯಪ್ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ಬಾಲಮಂದಿರಗಳಿಗೆ ರೂ.7 ಕೋಟಿ, 7 ಹೊಸ ಬಾಲಮಂದಿರಗಳ ಸ್ಥಾಪನೆ ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಲಲಾಗಿದೆ. ನೆರೆ ಪ್ರದೇಶದ ಅಂಗನವಾಡಿಗಳ ಮರು ನಿರ್ಮಾಣ, 500 ಅಂಧ ವಿದ್ಯಾರ್ಥಿಗಳಿಗೆ ವಿಶೇಷ ಕಿಟ್, ಅಂಥ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ. 5 ಜಿಲ್ಲಗಳಲ್ಲಿ ತಾರಾಯಗಳ ಸ್ಥಾಪನೆ ಮಾಡಿ, ವಿಜ್ಞಾನ ಪ್ರತಿಭಾ ಶೋಧನೆ ಕಾರ್ಯಕ್ರಮ ನಡೆಸಲಾಗುವುದು. 500 ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣ ನೀಡಲಾಗುವುದು. ಇದಕ್ಕಾಗಿ ಮಾಸಿಕ ರೂ.1 ಸಾವಿರ ಶಿಷ್ಯ ವೇತನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!