ವಿದ್ಯಾರ್ಥಿಗಳ ಬ್ಯಾಗ್ ಭಾರ ಕಡಿಮೆಗೊಳಿಸಲು 'ಸಂಭ್ರಮ ಶನಿವಾರ'; ಯಡಿಯೂರಪ್ಪ 
ರಾಜ್ಯ ಬಜೆಟ್

ವಿದ್ಯಾರ್ಥಿಗಳ ಬ್ಯಾಗ್ ಭಾರ ಕಡಿಮೆಗೊಳಿಸಲು 'ಸಂಭ್ರಮ ಶನಿವಾರ'; ಯಡಿಯೂರಪ್ಪ

ಕ್ಷಣವನ್ನು ಸರಳವಾಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಮಕ್ಕಳಿಗೆ ಬ್ಯಾಗ್ ಗಳ ಭಾರವನ್ನು ಕಡಿಮೆಗೊಳಿಸಲು ಮುಂದಾಗಿದೆ. ಇದಕ್ಕಾಗಿ ಪ್ರತಿ ತಿಂಗಳಿನ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನಗಳೆಂದು ಪರಿಗಣಿಸಿ 'ಸಂಭ್ರಮ ಶನಿವಾರ' ಆಚರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಬೆಂಗಳೂರು: ಶಿಕ್ಷಣವನ್ನು ಸರಳವಾಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಮಕ್ಕಳಿಗೆ ಬ್ಯಾಗ್ ಗಳ ಭಾರವನ್ನು ಕಡಿಮೆಗೊಳಿಸಲು ಮುಂದಾಗಿದೆ. ಇದಕ್ಕಾಗಿ ಪ್ರತಿ ತಿಂಗಳಿನ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನಗಳೆಂದು ಪರಿಗಣಿಸಿ 'ಸಂಭ್ರಮ ಶನಿವಾರ' ಆಚರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಗುರುವಾರ ವಿಧಾನಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡಿಸಿದ ಯಡಿಯೂರಪ್ಪ, ಸಂಭ್ರಮ ಶನಿವಾರದಂದು ಮಕ್ಕಳಿಗೆ ಚಟುವಟಿಕೆಗಳಿಗೆ ಮೂಲಕ ದೇಶದ ಉತ್ತಮ ನಾಗರಿಕರಾಗಲು ಅವಶ್ಯವಿರುವ ವಿಷಯಗಳ ಕುರಿತು ಅರಿವು ಮೂಡಿಸಲಾಗುವುದು ಎಂದರು. 

ಕಳೆದ ವರ್ಷ ಸಂಭವಿಸಿದ ಭೀಕರ ಅತಿವೃಷ್ಠಿಯಿಂದ ಹಲವು ಶಾಲಾ ಕೊಠಡಿಗಳು ತೀವ್ರವಾಗಿ ಹಾನಿಗೊಳಗಾಗಿವೆ. ನಬಾರ್ಡ್ ಯೋಜನೆಯಡಿ 758 ಕೋಟಿ ರೂ. ವೆಚ್ಚದಲ್ಲಿ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. 

ಶಾಸಕರಿಂದ ಶಾಲೆಗಳ ದತ್ತು:
ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ಮೂರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಸೂಚಿಸಲಾಗುವುದು. ಇದಕ್ಕಾಗಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಪ್ರಕಟಿಸಿದರು. 

ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ ಒದಗಿಸಲಾಗುವುದು. 2020-21ನೇ ಸಾಲಿನಲ್ಲಿ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದುವಿನೊಂದಿಗೆ ಆಂಗ್ಲ ಮಾಧ್ಯಮವನ್ನು ಆರಂಭಿಸಲಾಗುವುದು. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಕಟಿಸಿದರು. 

ರಾಜ್ಯದ ಉನ್ನತ ಶಿಕ್ಷಣದ ನಿವ್ವಳ ನೋಂದಣಿ ಅನುಪಾತ ಹೆಚ್ಚಿಸಲು ಇಂಟರಾಕ್ಟೀವ್ ಆನ್ -ಲೈನ್ ಕೋರ್ಸ್ ಗಳನ್ನು ಆರಂಭಿಸಲಾಗುವುದು. ಇದರ ಇ-ಕಂಟೆಂಟ್ ತಯಾರಿಗೆ ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದರು. 

ಬೆಂಗಳೂರಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಏಷ್ಯಾ ಖಂಡದ ವಿವಿಧ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು ಎಂದು ಪ್ರಕಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT