ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸಲಿರುವ ಬಿಎಸ್'ವೈ, ಹೊಸ ಯೋಜನೆಗಳೇನು?

4ನೇ ಬಾರಿ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಪ್ರಸಕ್ತ ಹಣಕಾಸು ಪರಿಸ್ಥಿತಿ ಹಿನ್ನೆಲೆಯಲ್ಲಿ ಎಲ್ಲವನ್ನು ಹೇಗೆ ಸರಿದೂಗಿಸುತ್ತಾರೆ ಎಂಬುದು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ. 

ಬೆಂಗಳೂರು: 4ನೇ ಬಾರಿ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಪ್ರಸಕ್ತ ಹಣಕಾಸು ಪರಿಸ್ಥಿತಿ ಹಿನ್ನೆಲೆಯಲ್ಲಿ ಎಲ್ಲವನ್ನು ಹೇಗೆ ಸರಿದೂಗಿಸುತ್ತಾರೆ ಎಂಬುದು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ. 

ತಮ್ಮ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಮತ್ತೊಂದು ಬಜೆಟ್ ಮಂಡಿಸುವ ಗೋಜಿಗೆ ಹೋಗದ ಯಡಿಯೂರಪ್ಪ ಅವರು ಹಿಂದಿನ ಕುಮಾರಸ್ವಾಮಿಯವರ ಸರ್ಕಾರದ ಬಜೆಟ್'ನ ಕಾರ್ಯಕ್ರಮಗಳನ್ನೇ ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತಿರುವುದರಿಂದ ಹಿಂದಿನ ಸರ್ಕಾರದ ಯಾವೆಲ್ಲಾ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಕೈಬಿಡುತ್ತಾರೆಂಬುದನ್ನು ಕಾದು ನೋಡಬೇಕಾಗಿದೆ. 

ಇನ್ನು ಇದು ಯಡಿಯೂರಪ್ಪ ಅವರ 7ನೇ ಬಜೆಟ್ ಆಗಿದೆ. ಈ ಹಿಂದೆ 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗಿದ್ದ ವೇಳೆ 2 ಬಾರಿ, ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 9 ಬಾರಿ ಬಜೆಟ್ ಮಂಡಿಸಿದ ದಾಖಲೆ ಇದೆ. 

ಕಳೆದ ಬಾರಿ ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ ಗಾತ್ರ 2.34 ಲಕ್ಷ ಕೋಟಿ ಇತ್ತು. ಈ ಬಾರಿ ಬಜೆಟ್ ಗಾತ್ರ ಕಡಿಮೆಯಾಗಬಹುದು ಎಂಬ ವಂದತಿ ಹಬ್ಬಿದ್ದರೂ ಅದನ್ನು ಸ್ವತಃ ಯಡಿಯೂರಪ್ಪ ಅವರು ತಳ್ಳಿಹಾಕಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 2.50 ಲಕ್ಷ ಕೋಟಿ ತಲುಪುವ ನಿರೀಕ್ಷೆಗಳಿವೆ. 

ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿರುವ ಯಡಿಯೂರಪ್ಪ ಅವರು, ರೈತಪರ ಬಜೆಟ್ ಮಂಡಿಸಲು ಮುಂದಾಗಿದ್ದಾರೆ. ಕೃಷಿ ಚಟುವಟಿಕೆಗೆ ಪೂರಕವಾದ ಇಲಾಖೆಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆಗಳಿವೆ. ಜೊತೆಗೆ ಲೋಕೋಪಯೋಗಿ ಹಾಗೂ ಮೂಲಸೌಕರ್ಯಕ್ಕೂ ಹೆಚ್ಚಿನ ಅನುದಾನ ನಿಗದಿಪಡಿಸುವುದು ನಿಶ್ಚಿತವಾಗಿದೆ. 

ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿರುವ ಯಡಿಯೂರಪ್ಪ ಅವರು ಕಳೆದ 1 ತಿಂಗಳಿಗೂ ಹೆಚ್ಚು ಸಮಯದಿಂದಲೇ ಪೂರ್ವಭಾವಿ ಸಿದ್ಧತೆ ನಡೆಸಿದ್ದಾರೆ. ಅರ್ಹ ಶಾಸಕರ ಸಂಪುಟ ಸೇರ್ಪಡೆ, ಸಂಪುಟ ವಿಸ್ತರಣೆ ಗೊಂದಲದ ನಡುವೆಯೇ ಸದ್ದಿಲ್ಲದೆ ಸರಣಿ ಸಭೆಗಲನ್ನು ನಡೆಸಿದ ಯಡಿಯೂರಪ್ಪ ಅವರು ಸಂಪನ್ಮೂಲ ಕ್ರೋಢೀಕರಿಸುವ ಕಸರತ್ತು ಮಾಡಿದರು. 

ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಹಿಂದಿನ ಸಮ್ಮಿಶ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಕೈಬಿಡುವುದೂ ಕೂಡ ಅಷ್ಟು ಸುಲಭದ ಕೆಲಸವಲ್ಲ. ಹೀಗಾಗ ಅವುಗಳೆಲ್ಲವೂ ಉಳಿಸಿಕೊಂಡರೆ ಹೊಸದಾಗಿ ಹೆಚ್ಚಿನ ಯೋಜನೆಗಳನ್ನು ಘೋಷಿಸುವುದು ಕಷ್ಟವಾಗಬಹುದು. ಹೀಗಾಗಿ ಹಿಂದಿನ ಸರ್ಕಾರದ ಯೋಜನೆಗಳ ಪೈಕಿ ಕೆಲವನ್ನು ಕೈಬಿಡುವ ಅಥವಾ ಅನುದಾನ ಕಡಿತಗೊಳಿಸುವ ಪ್ರಯತ್ನ ಮಾಡುವ ಸಾಧ್ಯತೆಗಲಿವೆ. ಜೊತೆಗೆ ಕೇಂದ್ರ ಸರ್ಕಾರದ ಮಾದರಿಯಲ್ಲೇ ತೀರಾ ಜನಪ್ರಿಯ ಘೋಷಣೆಗಳಿಂದ ದೂರ ಉಳಿಯುವ ಪ್ರಯತ್ನ ಮಾಡಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT