ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ಮಹದಾಯಿ ಯೋಜನೆಗೆ ಮೀಸಲಿಟ್ಟ ಅನುದಾನ ಸಾಕೇ? ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು? 

2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹದಾಯಿ ಯೋಜನೆಗೆ ರೂ.500 ಅನುದಾನ ಮೀಸಲಿಟ್ಟಿದೆ. 

ಬೆಂಗಳೂರು: 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹದಾಯಿ ಯೋಜನೆಗೆ ರೂ.500 ಅನುದಾನ ಮೀಸಲಿಟ್ಟಿದೆ. 

ಉತ್ತರ ಕರ್ನಾಟಕದ ಜನತೆ ಪಾಲಿಗೆ ಮಹತ್ವದ ಯೋಜನೆಯಾಗಿರುವ ಮಹದಾಯಿಗೆ ರಾಜ್ಯ ಸರ್ಕಾರ ರೂ.500 ಕೋಟಿ ಘೋಷಣೆ ಮಾಡಿದೆ. ಈಗಾಗಲೇ ಈ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. 

ಮಹದಾಯಿ ನದಿ ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರ ಬಹುದಿನಗಳ ನಿರೀಕ್ಷೆಯನ್ನು ಈಡೇರಿಸಿತ್ತು. ಅದರ ಬೆನ್ನಲ್ಲೇ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲು ರೂ.2000 ಕೋಟಿ ಅವಶ್ಯಕತೆ ಇತ್ತು. ಅದರಂತೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಒದಗಿಸಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಇದೀಗ ರಾಜ್ಯ ಸರ್ಕಾರ ರೂ.500 ಕೋಟಿ ಅನುದಾನ ನೀಡಿದೆ. 

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ರೂ. 1500 ಕೋಟಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ರೂ. 500 ಕೋಟಿ ಅನುದಾನ ನೀಡಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ಬಯಲು ಸೀಮೆಯ ಹಲವು ಜಿಲ್ಲೆಗಳ ಕುಡಿಯುವ  ನೀರಿನ ಉದ್ದೇಶಕ್ಕಾಗಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆಗೆ ಈ ವರ್ಷ ರೂ.1500 ಕೋಟಿಗಳನ್ನು ನೀಡಲಾಗಿದೆ. 2012ರಲ್ಲಿ ರೂ.12,912.36 ಕೋಟಿ ಇದ್ದ ಯೋಜನಾ ವೆಚ್ಚ 2020ರ ಹೊತ್ತಿಗೆ ರೂ. 24,982 ಕೋಟಿಗೆ ಏರಿದೆ. ಈ ಬೃಹತ್ ಮೊತ್ತದ ಯೋಜನೆಗೆ ಈ ವರ್ಷ ನಿಗದಿಯಾಗಿರುವುದು ರೂ.1500 ಕೋಟಿ ಮಾತ್ರ. ಹೀಗಾಗಿ ಯೋಜನೆ ನಿರೀಕ್ಷಿತ ವೇಗದಲ್ಲಿ ನಡೆಯುವುದೇ ಎಂಬ ಅನುಮಾನಗಳು ಮೂಡತೊಡಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT