ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ಮಹದಾಯಿ ಯೋಜನೆಗೆ ಮೀಸಲಿಟ್ಟ ಅನುದಾನ ಸಾಕೇ? ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು? 

2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹದಾಯಿ ಯೋಜನೆಗೆ ರೂ.500 ಅನುದಾನ ಮೀಸಲಿಟ್ಟಿದೆ. 

ಬೆಂಗಳೂರು: 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹದಾಯಿ ಯೋಜನೆಗೆ ರೂ.500 ಅನುದಾನ ಮೀಸಲಿಟ್ಟಿದೆ. 

ಉತ್ತರ ಕರ್ನಾಟಕದ ಜನತೆ ಪಾಲಿಗೆ ಮಹತ್ವದ ಯೋಜನೆಯಾಗಿರುವ ಮಹದಾಯಿಗೆ ರಾಜ್ಯ ಸರ್ಕಾರ ರೂ.500 ಕೋಟಿ ಘೋಷಣೆ ಮಾಡಿದೆ. ಈಗಾಗಲೇ ಈ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. 

ಮಹದಾಯಿ ನದಿ ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರ ಬಹುದಿನಗಳ ನಿರೀಕ್ಷೆಯನ್ನು ಈಡೇರಿಸಿತ್ತು. ಅದರ ಬೆನ್ನಲ್ಲೇ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲು ರೂ.2000 ಕೋಟಿ ಅವಶ್ಯಕತೆ ಇತ್ತು. ಅದರಂತೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಒದಗಿಸಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಇದೀಗ ರಾಜ್ಯ ಸರ್ಕಾರ ರೂ.500 ಕೋಟಿ ಅನುದಾನ ನೀಡಿದೆ. 

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ರೂ. 1500 ಕೋಟಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ರೂ. 500 ಕೋಟಿ ಅನುದಾನ ನೀಡಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ಬಯಲು ಸೀಮೆಯ ಹಲವು ಜಿಲ್ಲೆಗಳ ಕುಡಿಯುವ  ನೀರಿನ ಉದ್ದೇಶಕ್ಕಾಗಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆಗೆ ಈ ವರ್ಷ ರೂ.1500 ಕೋಟಿಗಳನ್ನು ನೀಡಲಾಗಿದೆ. 2012ರಲ್ಲಿ ರೂ.12,912.36 ಕೋಟಿ ಇದ್ದ ಯೋಜನಾ ವೆಚ್ಚ 2020ರ ಹೊತ್ತಿಗೆ ರೂ. 24,982 ಕೋಟಿಗೆ ಏರಿದೆ. ಈ ಬೃಹತ್ ಮೊತ್ತದ ಯೋಜನೆಗೆ ಈ ವರ್ಷ ನಿಗದಿಯಾಗಿರುವುದು ರೂ.1500 ಕೋಟಿ ಮಾತ್ರ. ಹೀಗಾಗಿ ಯೋಜನೆ ನಿರೀಕ್ಷಿತ ವೇಗದಲ್ಲಿ ನಡೆಯುವುದೇ ಎಂಬ ಅನುಮಾನಗಳು ಮೂಡತೊಡಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ