ರಾಜ್ಯ ಬಜೆಟ್

ರಾಜ್ಯಬಜೆಟ್ 2020-21: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಿಎಸ್'ವೈ ಕೊಡುಗೆ ಏನು? 

Manjula VN

ಬೆಂಗಳೂರು: 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. 

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಅಡಿಕೆ ಬೆಳೆಗಾರರ ಪ್ರಾಥಮಿಕ ಸಹಕಾರ ಸಂಘಗಳಿಗೆ ರೂ.2 ಲಕ್ಷ ವರೆಗೆ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ. 

ಬುಡಕಟ್ಟು ವೈದ್ಯ ಪದ್ಧತಿಗೆ ಪೂರಕವಾಗಿ ಔಷಧಿ ತಯಾರಿಕೆಗಾಗಿ ಶಿವಮೊಗ್ಗದಲ್ಲಿ ಔಷಧಿ ತಯಾರಿಕಾ ಘಟಕವನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. 

SCROLL FOR NEXT