ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2020: ಶಿಕ್ಷಣ ವಲಯಕ್ಕೆ ಏನೇನು? 

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2020-21ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ವಲಯಕ್ಕೆ 99 ಸಾವಿರದ 300 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಘೋಷಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2020-21ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ವಲಯಕ್ಕೆ 99 ಸಾವಿರದ 300 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಘೋಷಿಸಿದ್ದಾರೆ.


ಶಿಕ್ಷಣ ವಲಯಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಸಚಿವೆ ಘೋಷಿಸಿದ ಕ್ರಮಗಳು: 
-ಭಾರತದಲ್ಲಿ ಅಧ್ಯಯನವನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ 'ಸ್ಟಡಿ ಇನ್ ಇಂಡಿಯಾ'ಯೋಜನೆಯನ್ನು ಅಭಿವೃದ್ಧಿಪಡಿಸಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ.


-ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲು ಶಿಕ್ಷಕರ ಕಲಿಸುವ ಗುಣಮಟ್ಟ ಉತ್ತಮವಾಗಿರಬೇಕು. ಉತ್ತಮ ಶಿಕ್ಷಕರು ಸಿಗಲು ಅವರಿಗೆ ಉತ್ತಮ ವೇತನ ನೀಡಬೇಕು. ಹೀಗಾಗಿ ಶಿಕ್ಷಣ ವಲಯಕ್ಕೆ ಹೆಚ್ಚಿನ ಹಣಕಾಸು ಒದಗಿಸಲು ಕೇಂದ್ರ ಸರ್ಕಾರ ಮುಂದು.
-ಶಿಕ್ಷಣ ವಲಯಕ್ಕೆ ವಿದೇಶಿ ನೇರ ಹೂಡಿಕೆ(ಎಫ್ ಡಿಐ) ಮತ್ತು ಬಾಹ್ಯ ವಾಣಿಜ್ಯ ಸಾಲ(ಇಸಿಬಿ)ಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ.


-ಮಾರ್ಚ್ 2021ರ ವೇಳೆಗೆ 150 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮಗಳು.


-ಇಂಜಿನಿಯರಿಂಗ್ ಪದವಿ ಮುಗಿಸಿ ಆಗಷ್ಟೇ ಹೊರಬಂದ ಅಭ್ಯರ್ಥಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಒಂದು ವರ್ಷ ಕಾಲ ಉದ್ಯೋಗಾವಕಾಶ, ಇದರಿಂದ ಉದ್ಯೋಗ ಕಲಿಕೆಗೆ ಹೊಸ ಅಭ್ಯರ್ಥಿಗಳಿಗೆ ಒಂದು ಉತ್ತಮ ವೇದಿಕೆ ಒದಗಿಸುವುದು.


-ಇನ್ನು ಮುಂದೆ ಪದವಿ ಗಳಿಸಲು ಕಾಲೇಜು, ವಿವಿಗಳಿಗೆ ಹೋಗಬೇಕೆಂದೇನಿಲ್ಲ, ಉನ್ನತ 100 ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು(ಎನ್ಐಆರ್ ಎಫ್) ಸಂಸ್ಥೆಗಳಿಂದ ಸದ್ಯದಲ್ಲಿಯೇ ಆನ್ ಲೈನ್ ಕಲಿಕೆ ವ್ಯವಸ್ಥೆ ಪ್ರಾರಂಭ.


-ಭಾರತದಲ್ಲಿ ಕಲಿಕೆಗೆ ಏಷ್ಯಾ ಮತ್ತು ಆಫ್ರಿಕಾ ಖಂಡದವರಿಗೆ ಸ್ಕಾಲರ್ ಷಿಪ್.


-ಪೊಲೀಸ್ ಮತ್ತು ವಿಧಿ ವಿಜ್ಞಾನ ಅಕಾಡೆಮಿಗಳ ಸ್ಥಾಪನೆ.


-ವಿದೇಶಗಳಲ್ಲಿ ಶಿಕ್ಷಕರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಆರೈಕೆ ಮಾಡುವವರಿಗೆ ಭಾರಿ ಬೇಡಿಕೆ ಇದೆ. ಆದರೆ ಅವರಲ್ಲಿ ಕೆಲಸದ ಗುಣಮಟ್ಟ ಉತ್ತಮವಾಗಿಲ್ಲ. ಹೀಗಾಗಿ ಈ ಕ್ಷೇತ್ರಗಳ ಗುಣಮಟ್ಟ ಹೆಚ್ಚಿಸುವ ಅಗತ್ಯವಿದೆ.


-ಮೋದಿ ಸರ್ಕಾರದ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಲ್ಲಾ ಹಂತಗಳ ಶಿಕ್ಷಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ದಾಖಲಾತಿ ಪ್ರಮಾಣವೇ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT