ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2020: ಶಿಕ್ಷಣ ವಲಯಕ್ಕೆ ಏನೇನು? 

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2020-21ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ವಲಯಕ್ಕೆ 99 ಸಾವಿರದ 300 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಘೋಷಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2020-21ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ವಲಯಕ್ಕೆ 99 ಸಾವಿರದ 300 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಘೋಷಿಸಿದ್ದಾರೆ.


ಶಿಕ್ಷಣ ವಲಯಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಸಚಿವೆ ಘೋಷಿಸಿದ ಕ್ರಮಗಳು: 
-ಭಾರತದಲ್ಲಿ ಅಧ್ಯಯನವನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ 'ಸ್ಟಡಿ ಇನ್ ಇಂಡಿಯಾ'ಯೋಜನೆಯನ್ನು ಅಭಿವೃದ್ಧಿಪಡಿಸಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ.


-ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲು ಶಿಕ್ಷಕರ ಕಲಿಸುವ ಗುಣಮಟ್ಟ ಉತ್ತಮವಾಗಿರಬೇಕು. ಉತ್ತಮ ಶಿಕ್ಷಕರು ಸಿಗಲು ಅವರಿಗೆ ಉತ್ತಮ ವೇತನ ನೀಡಬೇಕು. ಹೀಗಾಗಿ ಶಿಕ್ಷಣ ವಲಯಕ್ಕೆ ಹೆಚ್ಚಿನ ಹಣಕಾಸು ಒದಗಿಸಲು ಕೇಂದ್ರ ಸರ್ಕಾರ ಮುಂದು.
-ಶಿಕ್ಷಣ ವಲಯಕ್ಕೆ ವಿದೇಶಿ ನೇರ ಹೂಡಿಕೆ(ಎಫ್ ಡಿಐ) ಮತ್ತು ಬಾಹ್ಯ ವಾಣಿಜ್ಯ ಸಾಲ(ಇಸಿಬಿ)ಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ.


-ಮಾರ್ಚ್ 2021ರ ವೇಳೆಗೆ 150 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮಗಳು.


-ಇಂಜಿನಿಯರಿಂಗ್ ಪದವಿ ಮುಗಿಸಿ ಆಗಷ್ಟೇ ಹೊರಬಂದ ಅಭ್ಯರ್ಥಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಒಂದು ವರ್ಷ ಕಾಲ ಉದ್ಯೋಗಾವಕಾಶ, ಇದರಿಂದ ಉದ್ಯೋಗ ಕಲಿಕೆಗೆ ಹೊಸ ಅಭ್ಯರ್ಥಿಗಳಿಗೆ ಒಂದು ಉತ್ತಮ ವೇದಿಕೆ ಒದಗಿಸುವುದು.


-ಇನ್ನು ಮುಂದೆ ಪದವಿ ಗಳಿಸಲು ಕಾಲೇಜು, ವಿವಿಗಳಿಗೆ ಹೋಗಬೇಕೆಂದೇನಿಲ್ಲ, ಉನ್ನತ 100 ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು(ಎನ್ಐಆರ್ ಎಫ್) ಸಂಸ್ಥೆಗಳಿಂದ ಸದ್ಯದಲ್ಲಿಯೇ ಆನ್ ಲೈನ್ ಕಲಿಕೆ ವ್ಯವಸ್ಥೆ ಪ್ರಾರಂಭ.


-ಭಾರತದಲ್ಲಿ ಕಲಿಕೆಗೆ ಏಷ್ಯಾ ಮತ್ತು ಆಫ್ರಿಕಾ ಖಂಡದವರಿಗೆ ಸ್ಕಾಲರ್ ಷಿಪ್.


-ಪೊಲೀಸ್ ಮತ್ತು ವಿಧಿ ವಿಜ್ಞಾನ ಅಕಾಡೆಮಿಗಳ ಸ್ಥಾಪನೆ.


-ವಿದೇಶಗಳಲ್ಲಿ ಶಿಕ್ಷಕರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಆರೈಕೆ ಮಾಡುವವರಿಗೆ ಭಾರಿ ಬೇಡಿಕೆ ಇದೆ. ಆದರೆ ಅವರಲ್ಲಿ ಕೆಲಸದ ಗುಣಮಟ್ಟ ಉತ್ತಮವಾಗಿಲ್ಲ. ಹೀಗಾಗಿ ಈ ಕ್ಷೇತ್ರಗಳ ಗುಣಮಟ್ಟ ಹೆಚ್ಚಿಸುವ ಅಗತ್ಯವಿದೆ.


-ಮೋದಿ ಸರ್ಕಾರದ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಲ್ಲಾ ಹಂತಗಳ ಶಿಕ್ಷಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ದಾಖಲಾತಿ ಪ್ರಮಾಣವೇ ಹೆಚ್ಚಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ