ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ ಜನಪರ, ರೈತರಿಗೆ ವರದಾನವಾಗುವ ಬಜೆಟ್: ಸಿಎಂ ಬಿಎಸ್ ವೈ ಮೆಚ್ಚುಗೆ

ಕೇಂದ್ರ ಬಜೆಟ್ ಜನಪರ ಬಜೆಟ್ ಆಗಿದ್ದು, ರೈತರಿಗೆ ವರದಾನವಾಗಲಿದೆ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೇಂದ್ರ ಬಜೆಟ್ ಜನಪರ ಬಜೆಟ್ ಆಗಿದ್ದು, ರೈತರಿಗೆ ವರದಾನವಾಗಲಿದೆ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಣಕಾಸು ಸಚಿವೆ ಹಾಗೂ ಪ್ರಧಾನಿಗೆ ರಾಜ್ಯದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಯಾವುದೇ ತೆರಿಗೆ ಭಾರ ಹಾಕದೆ ವಿನೂತನ ಬಜೆಟ್ ಮಂಡನೆ‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಈ ಬಜೆಟ್ ನಲ್ಲಿ ರೈತರಿಗೆ, ಬಡವರಿಗೆ, ಗ್ರಾಮೀಣ ಜನರಿಗೆ ಸಾಕಷ್ಟು ಒತ್ತು ನೀಡಲಾಗಿದೆ. ರೈತರಿಗೆ ಈ ಬಜೆಟ್ ವರದಾನವಾಗಿದೆ ಎಂದು ಹೇಳಿದರು.

ದೇಶದ ಜಿಡಿಪಿ ಪ್ರಗತಿಗೆ ಈ ಬಜೆಟ್ ನೆರವಾಗಲಿದೆ. ರೈತರ ಉತ್ಪನ್ನ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಕೃಷಿಗೆ ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.
 
ಶಿಕ್ಷಣ ಕ್ಷೇತ್ರದಲ್ಲಿ ಎಫ್‌ಡಿಐಯಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ರಫ್ತಿಗೆ ಆದ್ಯತೆ ನೀಡಲಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಎಕ್ಸ್ ಪೋರ್ಟ್ ಹಬ್ ಸ್ಥಾಪನೆಯಿಂದ ಅನುಕೂಲವಾಗಲಿದೆ. ಮೂಲಭೂತ ಸೌಕರ್ಯಕ್ಕೆ ಬಕೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉಪನಗರ ರೈಲು ಯೋಜನೆಗೆ 18,600 ಕೋಟಿ ರೂ. ಅನುಮೋದಿಸಿದ್ದಾರೆ. ಬೆಂಗಳೂರಿಗರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ. ಪಿಪಿಪಿ ಮಾದರಿಯಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT