ಸಭೆಯಲ್ಲಿ ಪ್ರಧಾನಿ ಮೋದಿ 
ಕೇಂದ್ರ ಬಜೆಟ್

ಆರ್ಥಿಕ ತಜ್ಞರೊಂದಿಗೆ ಪ್ರಧಾನಿ ಮೋದಿ ಬಜೆಟ್‍ಪೂರ್ವ ಸಮಾಲೋಚನೆ, 5 ಟ್ರಿಲಿಯನ್ ಆರ್ಥಿಕತೆಗೆ ಶ್ರಮಿಸುವಂತೆ ಕರೆ

ಬಜೆಟ್ ಪೂರ್ವ ಸಿದ್ಧತೆಗಳ ಭಾಗವಾಗಿ ಪ್ರಧಾನಿ ನರೇಂದ್ರಮೋದಿ ಗುರುವಾರ ಆರ್ಥಿಕ ತಜ್ಞರು ಹಾಗೂ ವಿವಿಧ ವಲಯಗಳ ಪರಿಣತರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ಸಭೆ ನಡೆಸಿದರು.

ನವದೆಹಲಿ: ಬಜೆಟ್ ಪೂರ್ವ ಸಿದ್ಧತೆಗಳ ಭಾಗವಾಗಿ ಪ್ರಧಾನಿ ನರೇಂದ್ರಮೋದಿ ಗುರುವಾರ ಆರ್ಥಿಕ ತಜ್ಞರು ಹಾಗೂ ವಿವಿಧ ವಲಯಗಳ ಪರಿಣತರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ಸಭೆ ನಡೆಸಿದರು.

ಸಭೆಯಲ್ಲಿ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಸಾಧಿಸುವಂತಾಗಲು ವಿಶೇಷ ಪ್ರಯತ್ನಗಳನ್ನು ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದರು.

ಹಿರಿಯ ಆರ್ಥಿಕ ತಜ್ಞರು, ಖಾಸಗಿ ಈಕ್ವಿಟಿ ಮತ್ತು ಉದ್ಯಮಿಗಳು, ತಯಾರಿಕೆ, ಪ್ರಸಾಸೋದ್ಯಮ-ಸಾರಿಗೆ, ಸಿದ್ದ ಉಡುಪು, ಎಫ್ ಎಂಸಿಜಿ ಹಾಗೂ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಹಣಕಾಸು ವಲಯದ ತಜ್ಞರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಈ ಸಭೆಯ ಮೂಲಕ ನೀತಿ ನಿರೂಪಕರು ಮತ್ತು ವಿವಿಧ ಭಾಗೀದಾರರೊಂದಿಗೆ ಸಮನ್ವಯತೆ ವೃದ್ಧಿಸಲಿದೆ. ಭಾರತ, 5 ಟ್ರಿಲಿಯನ್ ಆರ್ಥಿಕತೆಯಾಗುವ ಆಲೊಚನೆ ದಿಢೀರ್ ಬೆಳವಣಿಗೆಯಲ್ಲ. ದೇಶದ ಸಾಮರ್ಥ್ಯದ ಬಗ್ಗೆ ಅಗಾಧವಾಗಿ ತಿಳಿದು ಈ ಗುರಿ ಹೊಂದಲಾಗಿದೆ. ಮೂಲ ಅಡಿಪಾಯದಿಂದ ಪುಟಿದೇಳುವ ಸಾಮರ್ಥ್ಯ ಭಾರತೀಯ ಆರ್ಥಿಕತೆಗೆ ಇದೆ ಎಂದು ಪ್ರಧಾನಿ ಹೇಳಿದರು.

ಸದ್ಯದ ಆರ್ಥಿಕತೆ ಕುರಿತಂತೆ ಮತ್ತು ಪ್ರಸಕ್ತ ಸಾಲಿನಲ್ಲಿ ಆರ್ಥಿಕ ಬೆಳವಣಿಗೆ ಶೇ. 5ಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಆರ್ಥಿಕ ಪುನಶ್ಚೇತನಕ್ಕೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಕಳೆದೊಂದು ವಾರದಿಂದ ಹಿರಿಯ ಆರ್ಥಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ನೀತಿ ಆಯೋಗ ಉಪಾಧ್ಯಕ್ಷ ರಾಜೀವ್ ಕುಮಾರ್, ನೀತಿ ಆಯೋಗ ಸಿಇಒ ಅಮಿತಾಭ್ ಕಾಂತ್ ಮತ್ತು ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಬಜೆಟ್ ಪೂರ್ವ ಸಿದ್ಧತೆಗಳ ಭಾಗವಾಗಿ ನೀತಿ ಆಯೋಗ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಹಾಗೂ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿತಿನ್ ಗಡ್ಕರಿ, ರೈಲ್ವೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಕೃಷಿ ಮತ್ತು ರೈತರ ಕಲ್ಯಾಣ, ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT