ನಿರ್ಮಲಾ ಸೀತಾರಾಮನ್ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2022: ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚಿನ ಹಣಕಾಸು ನೆರವು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಾಯ

2021-22ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯದಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು ನೀಡುವ ಯೋಜನೆಗೆ ವೆಚ್ಚವನ್ನು 10 ಸಾವಿರ ಕೋಟಿ ರೂಪಾಯಿಗಳಿಂದ 1 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬೆಂಗಳೂರು: 2021-22ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯದಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು ನೀಡುವ ಯೋಜನೆಗೆ ವೆಚ್ಚವನ್ನು 10 ಸಾವಿರ ಕೋಟಿ ರೂಪಾಯಿಗಳಿಂದ 1 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಿನ್ನೆ ಲೋಕಸಭೆಯಲ್ಲಿ ಕೇಂದ್ರ ಬಜೆಟ್-2022ನ್ನು ಮಂಡಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಇದರಿಂದ ಸಹಾಯವಾಗಲಿದ್ದು, ಅದರಲ್ಲೂ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ಬಂದರುಗಳ ಯೋಜನೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ತಂದಿರುವ ಘಟಿ ಶಕ್ತಿ ಯೋಜನೆಗಳಿಗೆ ಈ ಹಣಕಾಸು ನೆರವಿನಿಂದ ಸಹಾಯವಾಗಲಿದೆ ಎಂದರು. 

ಕರ್ನಾಟಕ ರಾಜ್ಯ ಕಳೆದ ಹಣಕಾಸು ವರ್ಷದಲ್ಲಿ 380 ಕೋಟಿ ರೂಪಾಯಿಗಳನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಡೆದಿದ್ದು ಪ್ರಸಕ್ತ ಹಣಕಾಸು ಸಾಲಿನಲ್ಲಿ 3 ಸಾವಿರ ಕೋಟಿ ರೂಪಾಯಿ ಪಡೆಯುವ ನಿರೀಕ್ಷೆಯಿದೆ.

2022-23ಕ್ಕೆ, ಆರ್ಥಿಕತೆಯಲ್ಲಿ ಒಟ್ಟಾರೆ ಹೂಡಿಕೆಗಳನ್ನು ಹೆಚ್ಚಿಸಲು ರಾಜ್ಯಗಳಿಗೆ ಸಹಾಯ ಮಾಡಲು 1 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಈ 50 ವರ್ಷಗಳ ಬಡ್ಡಿ ರಹಿತ ಸಾಲಗಳು ರಾಜ್ಯಗಳಿಗೆ ನೀಡುತ್ತಿರುವ ಸಾಮಾನ್ಯ ಸಾಲಗಳಿಗಿಂತ ಹೆಚ್ಚಿವೆ ಎಂದು ಸೀತಾರಾಮನ್ ಸ್ಪಷ್ಟಪಡಿಸಿದರು.

ರಾಜ್ಯಗಳು ಸಾಲಗಳನ್ನು ಪಡೆಯಲು ಅರ್ಹವಾಗಿರುವಾಗ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಮೇರೆಗೆ ಯಾವುದೇ ಕೆಲಸಗಳಿಗೆ ಹಣ ಖರ್ಚು ಮಾಡಲು ಸ್ವಾತಂತ್ರ್ಯವಿರುತ್ತದೆ. ಕರ್ನಾಟಕದ ಬಿಜೆಪಿ ಸರ್ಕಾರ ಆದ್ಯತೆ ಮೇರೆಗೆ ಹೆದ್ದಾರಿಗಳ ಅಭಿವೃದ್ಧಿ,  ಮೆಟ್ರೊ ರೈಲುಗಳು, ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ನೀರಾವರಿ ಸೌಕರ್ಯಗಳ ಅಭಿವೃದ್ಧಿಗೆ ಬಳಸಿಕೊಳ್ಳುವ ಸಾಧ್ಯತೆಯಿದೆ.

ರಾಜ್ಯಗಳಿಗೆ ಬಂಡವಾಳದ ವೆಚ್ಚವನ್ನು ಹೆಚ್ಚಿಸಿರುವುದರಿಂದ, ನಮ್ಮ ಬಂಡವಾಳದ ವೆಚ್ಚದಲ್ಲಿ ಹೆಚ್ಚುವರಿ 3 ಸಾವಿರ ಕೋಟಿ ರೂಪಾಯಿಗಳನ್ನು ನಾವು ನಿರೀಕ್ಷಿಸುತ್ತೇವೆ. ರಸ್ತೆ ಮಾರ್ಗಗಳು ಮತ್ತು ರೈಲ್ವೆ ಯೋಜನೆಗಳಲ್ಲಿ ನಮ್ಮ ಪಾಲನ್ನು ನಾವು ಹೊಂದಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಘಟಿ ಶಕ್ತಿ ಯೋಜನೆಗಳ ಮೂಲಕ ತಮ್ಮ ಬಜೆಟ್ ವೆಚ್ಚವನ್ನು ಹೆಚ್ಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ರಾಜ್ಯವು ಕಳೆದ ಹಣಕಾಸು ವರ್ಷದಲ್ಲಿ 380 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದು ಪ್ರಸಕ್ತ ಹಣಕಾಸು ವರ್ಷದಲ್ಲಿ ವರ್ಧಿತ ಸಾಲವನ್ನು ಮುಂದಿನ ಏಪ್ರಿಲ್ ತಿಂಗಳಲ್ಲಿ ಹಿಂದಿನ ವರ್ಷಕ್ಕೆ ಅನುಗುಣವಾಗಿ ಪಡೆಯಲು ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT