ವಿಧಾನಸೌಧಕ್ಕೆ ಸಿಎಂ ಬಜೆಟ್ ಭಾಷಣ ವೇಳೆ ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರರು 
ರಾಜ್ಯ ಬಜೆಟ್

ಕಿವಿ ಮೇಲೆ ಹೂವು ಇಟ್ಟುಕೊಳ್ಳುವ ಮಾತು: ಸಿಎಂ ವಿರುದ್ಧ ಕೆರಳಿದ ಕಾಂಗ್ರೆಸ್; ಬಜೆಟ್ ಭಾಷಣ ಆರಂಭದಲ್ಲಿಯೇ ಸದನದಲ್ಲಿ ಗದ್ದಲ-ಕೋಲಾಹಲ

2023ನೇ ಸಾಲಿನ ಬಜೆಟ್ ಆರಂಭದಲ್ಲಿಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯೆ ಆರೋಪ-ಪ್ರತ್ಯಾರೋಪ, ಗದ್ದಲಕ್ಕೆ ಸದನ ಸಾಕ್ಷಿಯಾಯಿತು

ಬೆಂಗಳೂರು: 2023ನೇ ಸಾಲಿನ ಬಜೆಟ್ ಆರಂಭದಲ್ಲಿಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯೆ ಆರೋಪ-ಪ್ರತ್ಯಾರೋಪ, ಗದ್ದಲಕ್ಕೆ ಸದನ ಸಾಕ್ಷಿಯಾಯಿತು

ಬಜೆಟ್ ಪ್ರತಿಯನ್ನು ಓದಲು ಆರಂಭಿಸಿದಾಗ ಮುಖ್ಯಮಂತ್ರಿ ಬೊಮ್ಮಾಯಿಯವರು, ವಿಪಕ್ಷಗಳು ಒಂದು ವಿಷಯ ಅರ್ಥ ಮಾಡಿಕೊಳ್ಳಬೇಕು. ಕಿವಿ ಮೇಲೆ ಹೂವು ಯಾಕಿಟ್ಟು ಕೊಳ್ಳುತ್ತೀರಾ, ಅದ್ರೂ ಅವರು ಇಟ್ಟುಕೊಳ್ಳುತ್ತಿದ್ದಾರೆ-ಇಷ್ಟು ದಿನ ಜನರ ಮೇಲೆ ಅವರು ಹೂವು ಇಡುತ್ತಿದ್ದರು, ಇನ್ನು ಮುಂದೆ ಜನರು ಅವರ ಮೇಲೆ ಹೂವು ಇಡುತ್ತಾರೆ ಎಂದರು.

ಇದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಕೆರಳಿಸಿತು. ನೀವು ಕೊಟ್ಟ 600 ಭರವಸೆಗಳಲ್ಲಿ 50ಕ್ಕೂ ಈಡೇರಿಸಲಿಲ್ಲ. ಈಗ ನಮಗೆ ಕಿವಿ ಮೇಲೆ ಹೂವಿಟ್ಟುಕೊಳ್ಳುವ ಪಾಠ ಮಾಡಲು ಬರುತ್ತೀರಾ ಎಂದು ಆಕ್ರೋಶಭರಿತರಾಗಿ ಮಾತನಾಡಿದರು.

ಆಗ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಗದ್ದಲ, ಕೋಲಾಹಲವನ್ನು ಸಹಜ ಸ್ಥಿತಿಗೆ ತರಲು ಸಾಕುಸಾಕಾಯಿತು. ಕೊನೆಗೆ ಮುಖ್ಯಮಂತ್ರಿಗಳಿಗೆ ಬಜೆಟ್ ಭಾಷಣ ಮಾಡಲು ಸೂಚನೆ ನೀಡಿದರು. ಅದರ ಪ್ರಕಾರ ಮುಖ್ಯಮಂತ್ರಿಗಳು ಓದಲು ಆರಂಭಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT