ವಿಧಾನಸೌಧಕ್ಕೆ ಸಿಎಂ ಬಜೆಟ್ ಭಾಷಣ ವೇಳೆ ಕಿವಿ ಮೇಲೆ ಹೂವು ಇಟ್ಟುಕೊಂಡು ಬಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರರು 
ರಾಜ್ಯ ಬಜೆಟ್

ಕಿವಿ ಮೇಲೆ ಹೂವು ಇಟ್ಟುಕೊಳ್ಳುವ ಮಾತು: ಸಿಎಂ ವಿರುದ್ಧ ಕೆರಳಿದ ಕಾಂಗ್ರೆಸ್; ಬಜೆಟ್ ಭಾಷಣ ಆರಂಭದಲ್ಲಿಯೇ ಸದನದಲ್ಲಿ ಗದ್ದಲ-ಕೋಲಾಹಲ

2023ನೇ ಸಾಲಿನ ಬಜೆಟ್ ಆರಂಭದಲ್ಲಿಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯೆ ಆರೋಪ-ಪ್ರತ್ಯಾರೋಪ, ಗದ್ದಲಕ್ಕೆ ಸದನ ಸಾಕ್ಷಿಯಾಯಿತು

ಬೆಂಗಳೂರು: 2023ನೇ ಸಾಲಿನ ಬಜೆಟ್ ಆರಂಭದಲ್ಲಿಯೇ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮಧ್ಯೆ ಆರೋಪ-ಪ್ರತ್ಯಾರೋಪ, ಗದ್ದಲಕ್ಕೆ ಸದನ ಸಾಕ್ಷಿಯಾಯಿತು

ಬಜೆಟ್ ಪ್ರತಿಯನ್ನು ಓದಲು ಆರಂಭಿಸಿದಾಗ ಮುಖ್ಯಮಂತ್ರಿ ಬೊಮ್ಮಾಯಿಯವರು, ವಿಪಕ್ಷಗಳು ಒಂದು ವಿಷಯ ಅರ್ಥ ಮಾಡಿಕೊಳ್ಳಬೇಕು. ಕಿವಿ ಮೇಲೆ ಹೂವು ಯಾಕಿಟ್ಟು ಕೊಳ್ಳುತ್ತೀರಾ, ಅದ್ರೂ ಅವರು ಇಟ್ಟುಕೊಳ್ಳುತ್ತಿದ್ದಾರೆ-ಇಷ್ಟು ದಿನ ಜನರ ಮೇಲೆ ಅವರು ಹೂವು ಇಡುತ್ತಿದ್ದರು, ಇನ್ನು ಮುಂದೆ ಜನರು ಅವರ ಮೇಲೆ ಹೂವು ಇಡುತ್ತಾರೆ ಎಂದರು.

ಇದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಕೆರಳಿಸಿತು. ನೀವು ಕೊಟ್ಟ 600 ಭರವಸೆಗಳಲ್ಲಿ 50ಕ್ಕೂ ಈಡೇರಿಸಲಿಲ್ಲ. ಈಗ ನಮಗೆ ಕಿವಿ ಮೇಲೆ ಹೂವಿಟ್ಟುಕೊಳ್ಳುವ ಪಾಠ ಮಾಡಲು ಬರುತ್ತೀರಾ ಎಂದು ಆಕ್ರೋಶಭರಿತರಾಗಿ ಮಾತನಾಡಿದರು.

ಆಗ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಗದ್ದಲ, ಕೋಲಾಹಲವನ್ನು ಸಹಜ ಸ್ಥಿತಿಗೆ ತರಲು ಸಾಕುಸಾಕಾಯಿತು. ಕೊನೆಗೆ ಮುಖ್ಯಮಂತ್ರಿಗಳಿಗೆ ಬಜೆಟ್ ಭಾಷಣ ಮಾಡಲು ಸೂಚನೆ ನೀಡಿದರು. ಅದರ ಪ್ರಕಾರ ಮುಖ್ಯಮಂತ್ರಿಗಳು ಓದಲು ಆರಂಭಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT