ಸಿಎಂ ಬೊಮ್ಮಾಯಿ 
ರಾಜ್ಯ ಬಜೆಟ್

Karnataka Budget 2023: 6 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ಪಂಗಡದ ಮಕ್ಕಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಸ್ಥಾಪನೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಸ್‌ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವ 2 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು 4 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದರು.

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, 2ನೇ ಬಾರಿಗೆ ಮುಖ್ಯಮಂತ್ರಿ ಬಜೆಟ್ ಮಂಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಹಲವಾರು ಕೊಡುಗೆಗಳನ್ನು ಘೋಷಿಸಿದ್ದಾರೆ.

ವಿದ್ಯಾರ್ಥಿನಿಲಯಗಳು ಇಲ್ಲದೇ ಇರುವ ಜಿಲ್ಲಾ ಕೇಂದ್ರಗಳಲ್ಲಿ ಪರಿಶಿಷ್ಟ ಪಂಗಡದ ಮಕ್ಕಳಿಗೆ 14 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಸ್‌ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿರುವ 2 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು 4 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದರು.

ಐಎಸ್ಇಸಿ ಸಂಸ್ಥೆಯಲ್ಲಿ ಪಿಎಚ್.ಡಿ ಮಾಡುವ 5 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ವಿದ್ಯಾರ್ಥಿಗಳಿಗೆ ಡಾ. ಬಿಆರ್ ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ರೂ. 'ಅನಿಯಂತ್ರಿತ ಶಾಶ್ವತ ನಿಧಿ' (Corpus Fund) ಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಪಡೆಯುವ ಗರಿಷ್ಠ 10 ಲಕ್ಷ ರೂ. ವರೆಗಿನ ಸಾಲವನ್ನು ಶೇ 4ರಷ್ಟು ಬಡ್ಡಿದರಲ್ಲಿ ದೊರಕಿಸಲು ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10 ಸಾವಿರ ಮಂದಿಗೆ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ ನೀಡಲಾಗುವುದು ಎಂದು ಹೇಳಿದರು.

ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ಕ್ರೈಸ್ ವಸತಿ ಶಾಲೆಗಳಲ್ಲಿ, ಶಾಲೆಗೆ ಒಂದರಂತೆ ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯವನ್ನು 10 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು ಎಂದು ತಿಳಿಸಿದರು.

ಬಜೆಟ್ ಮುಖ್ಯಾಂಶಗಳು

*ಸಫಾಯಿ ಕರ್ಮಚಾರಿಗಳಿಗೆ ರಾಜೀವ್‌ಗಾಂದಿ ವಸತಿ ನಿಗಮದ ವತಿಯಿಂದ ವಸತಿ ಸೌಲಭ್ಯ ನೀಡಲು ಕ್ರಮ

*ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸೇರಿದ ವಿವಿಧ 6 ನಿಗಮಗಳಿಗೆ ನೀಡುವ ಅನುದಾನ ಹೆಚ್ಚಿಸಿ, 795 ಕೋಟಿ ರೂ. ಒದಗಿಸಲಾಗುವುದು.

*20 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು 'Build too Suit' ಮಾದರಿಯಲ್ಲಿ ನಿರ್ಮಾಣ

* ಹಿಂದುಳಿದ ವರ್ಗಗಳಿಗೆ ಸೇರಿದ 11 ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿರುವ ಅನುದಾನ ಹೆಚ್ಚಿಸಿ 596 ಕೋಟಿ ರೂ. ಒದಗಿಸಲಾಗುವುದು

* ಗಂಗಾ ಕಲ್ಯಾಣ ಯೋಜನೆಯಡಿ 490 ಕೋಟಿ ರೂ. ವೆಚ್ಚದಲ್ಲಿ 19,731 ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಗುರಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT