ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಸಿದ್ದರಾಮಯ್ಯ ಬಜೆಟ್: ಜಲಸಂಪನ್ಮೂಲ ಇಲಾಖೆಗೆ 1 ಲಕ್ಷ ಕೋಟಿ ರೂ. ಮೀಸಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆ 1 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆ 1 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ರಾಜ್ಯದಲ್ಲಿ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 940 ಕೋಟಿ ಮೀಸಲಿಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ತಮ್ಮ 14ನೇ ಬಜೆಟ್ ನಲ್ಲಿ 770 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.

19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ಸರ್ಕಾರ ನಿರ್ಧಾರಿಸಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ 5 ಸಾವಿರ ಕೋಟಿ ರೂ., ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 1 ಸಾವಿರ ಕೋಟಿ ರೂ., ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ., ಎತ್ತಿನಹೊಳೆ ಯೋಜನೆ 3 ಸಾವಿರ ಕೋಟಿ ರೂ. ಹಾಗೂ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?