ಸಿಎಂ ಸಿದ್ದರಾಮಯ್ಯ 
ರಾಜ್ಯ ಬಜೆಟ್

ಸಿದ್ದರಾಮಯ್ಯನವರ ಬಜೆಟ್ ನಲ್ಲಿ 'ಅಹಿಂದ'ಕ್ಕೆ ಬಲ: ಸಮುದಾಯಗಳಿಗೆ ಸಿಕ್ಕಿರುವ ಕೊಡುಗೆಯೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚ್ಚುಮೆಚ್ಚಿನ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಸಂಕ್ಷಿಪ್ತ ರೂಪ) ಸಮುದಾಯಕ್ಕೆ ಅವರು ಈ ಬಾರಿ ಬಜೆಟ್ ನಲ್ಲಿ ದೊಡ್ಡ ಒತ್ತು ನೀಡಿದ್ದು, ಸಮುದಾಯಗಳ ಸದಸ್ಯರಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚ್ಚುಮೆಚ್ಚಿನ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಸಂಕ್ಷಿಪ್ತ ರೂಪ) ಸಮುದಾಯಕ್ಕೆ ಅವರು ಈ ಬಾರಿ ಬಜೆಟ್ ನಲ್ಲಿ ದೊಡ್ಡ ಒತ್ತು ನೀಡಿದ್ದು, ಸಮುದಾಯಗಳ ಸದಸ್ಯರಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಶಿಕ್ಷಣ ಸಾಲ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಬ್ಸಿಡಿ ಸಾಲವನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಎಲ್ಲಾ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿಗಳನ್ನು ಘೋಷಿಸಲಾಯಿತು. ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ಘೋಷಿಸಿದರು. ಹಜ್ ಭವನದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಐಎಎಸ್/ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹತ್ತು ತಿಂಗಳ ರೆಸಿಡೆನ್ಶಿಯಲ್ ಕೋಚಿಂಗ್ ನೀಡಲಾಗುವುದು. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಕಾರ್ಯಕ್ರಮಕ್ಕೆ 360 ಕೋಟಿ ರೂಪಾಯಿ ಧನಸಹಾಯ ನಿಗದಿ ಮಾಡಲಾಗಿದೆ. 

ಈ ವರ್ಷದ ಫೆಬ್ರವರಿಯಲ್ಲಿ ಬಜೆಟ್ ನಲ್ಲಿ 30,215 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪ ಯೋಜನೆಗೆ ಪರಿಶಿಷ್ಟ ಜಾತಿ ಉಪ ಯೋಜನೆಗೆ (SCSp) 4,079 ಕೋಟಿ ರೂಪಾಯಿಗಳನ್ನು ಸಿದ್ದರಾಮಯ್ಯ ಘೋಷಿಸಿದ್ದಾರೆ. 

ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯಲು ಹಲವು ಯೋಜನೆಗಳ ಜೊತೆಗೆ ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿ ಕುಟುಂಬಗಳ 100 ಯುವಕರಿಗೆ ಉದ್ಯಮದಲ್ಲಿ ಹೊಸ ತಂತ್ರಜ್ಞಾನಗಳು ಮತ್ತು ವಿನ್ಯಾಸಗಳನ್ನು ಪರಿಚಯಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಚರ್ಮದ ಪ್ರಮುಖ ತಯಾರಕರು ಇರುವ ಇತರ ರಾಜ್ಯಗಳಲ್ಲಿ ಫಲಾನುಭವಿಗಳನ್ನು ತರಬೇತಿಗಾಗಿ ಕಳುಹಿಸಲಾಗುವುದು. ಕೇಂದ್ರ ಪರಿಹಾರ ಸಮಿತಿಯ ಸಹಯೋಗದೊಂದಿಗೆ ಪ್ರತಿ ಜಿಲ್ಲೆಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ವೃದ್ಧಾಶ್ರಮಗಳನ್ನು ಸ್ಥಾಪಿಸಲು ಅವರು ಪ್ರಸ್ತಾಪಿಸಿದರು. 

ಆದಿವಾಸಿಗಳಿಗೆ, ಕಾಡು ಕುರುಬ, ಕೊರಗ, ಇರುಳಿಗ ಮತ್ತು ಸೋಲಿಗ ಸೇರಿದಂತೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂಪಾಯಿಗಳನ್ನು ಸಿದ್ದರಾಮಯ್ಯ ಘೋಷಿಸಿದರು. ಅರಣ್ಯ ಉತ್ಪನ್ನಗಳನ್ನು ಉತ್ತೇಜಿಸಲು ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು.

2013-2018ರ ಅವಧಿಯಲ್ಲಿ ಘೋಷಿಸಿದ ಕೆಲವು ಯೋಜನೆಗಳನ್ನು ಮರುಪ್ರಾರಂಭಿಸುವುದಾಗಿ ಸಿಎಂ ಘೋಷಿಸಿದರು. ಪುನರಾರಂಭದ ಅರಿವು ಯೋಜನೆಯು ವೃತ್ತಿಪರ ಕೋರ್ಸ್‌ಗಳನ್ನು ಓದುತ್ತಿರುವ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶೇಕಡಾ 2 ರ ಬಡ್ಡಿಯೊಂದಿಗೆ ಗರಿಷ್ಠ 1 ಲಕ್ಷದವರೆಗೆ ಶಿಕ್ಷಣ ಸಾಲವನ್ನು ನೀಡುತ್ತದೆ ಎಂದು ಹೇಳಿದರು. ಉನ್ನತ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮರು ಪ್ರಾರಂಭಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆಯಲು ಬಯಸುವ ಒಬಿಸಿ ವಿದ್ಯಾರ್ಥಿಗಳಿಗೆ 10 ಕೋಟಿ ರೂಪಾಯಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT