ಸಿದ್ದರಾಮಯ್ಯ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2023: ರಾಜಧಾನಿ ಬೆಂಗಳೂರಿಗೆ ಘೋಷಿಸಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದು ಅದರಲ್ಲಿ ನಮ್ಮ ಮೆಟ್ರೊ ಮತ್ತು ಉಪನಗರ ರೈಲ್ವೆ ಯೋಜನೆ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂಬುದನ್ನು ಗುರುತಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದು ಅದರಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ಗಳು, ವೈಟ್ ಟಾಪಿಂಗ್, ಘನತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ಅತಿಕ್ರಮಣ ತಡೆಯುವಿಕೆ ಮತ್ತು ದುರಸ್ತಿ, ರಸ್ತೆಗಳ ಹೊಂಡ-ಗುಂಡಿ ತುಂಬುವುದು, ನಮ್ಮ ಮೆಟ್ರೊ ಮತ್ತು ಉಪನಗರ ರೈಲ್ವೆ ಯೋಜನೆ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂಬುದನ್ನು ಗುರುತಿಸಿದ್ದಾರೆ. 

- ಮುಂದಿನ ಮೂರು ವರ್ಷಗಳಲ್ಲಿ ನಮ್ಮ ಮೆಟ್ರೋವನ್ನು 70ಕಿಮೀಗಳಿಂದ 176 ಕಿಮೀಗಳಿಗೆ ಹೆಚ್ಚಿಸಲಾಗುವುದು. 2024 ರ ಅಂತ್ಯದ ವೇಳೆಗೆ, 27 ಕಿಮೀ ಹೆಚ್ಚುವರಿ ಮಾರ್ಗಗಳನ್ನು ಸೇರಿಸಲಾಗುವುದು. ಈ ವರ್ಷ ಬೈಯ್ಯಪ್ಪನಹಳ್ಳಿಯಿಂದ ಕೃಷ್ಣರಾಜಪುರ, ಕೆಂಗೇರಿಯಿಂದ ಚಲ್ಲಘಟ್ಟ, ನಾಗಸಂದ್ರದಿಂದ ಮಾದವಾರವರೆಗೆ, ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಮೆಟ್ರೊ ಸಂಚಾರವನ್ನು ವಿಸ್ತರಿಸಲಾಗುವುದು ಎಂದು ಹೇಳಿದರು. 

- ಒಟ್ಟು 45 ಕಿ.ಮೀ ಒಳಗೊಂಡಿರುವ ಮೆಟ್ರೋ ಹಂತ 3ಕ್ಕೆ ಡಿಪಿಆರ್ ಸಲ್ಲಿಸಲಾಗಿದೆ. ಹೆಬ್ಬಾಳದಿಂದ ಸರ್ಜಾಪುರವರೆಗೆ 37 ಕಿ.ಮೀ.ಗೆ ಹೊಸ ಮಾರ್ಗ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

- ಸಂಚಾರ ದಟ್ಟಣೆ ತಗ್ಗಿಸಲು ಬೆಂಗಳೂರು ಉಪನಗರ ರೈಲು ಯೋಜನೆಗೆ 1,000 ಕೋಟಿ ರೂಪಾಯಿ ನಿಗದಿ 

- ಬಿಬಿಎಂಪಿ ಸೇರಿದಂತೆ 314 ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ವಚ್ಛ ಭಾರತ 2.0 ಕ್ರಿಯಾ ಯೋಜನೆಗೆ 4,500 ಕೋಟಿ ರೂಪಾಯಿಗಳ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಮತ್ತು ಬಳಸಿದ ನೀರು ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯನವರು ಬಜೆಟ್ ಮಂಡನೆ ವೇಳೆ ಪ್ರಕಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT