ಆಪಲ್ ಸಂಸ್ಥೆಯ ಅಧಿಕಾರಿ ಜಾನ್ ರೆಯ್ನಾಲ್ಡ್ಸ್ ಜೊತೆಗೆ ರವಿಶಂಕರ್ ಪ್ರಸಾದ್ ಭೇಟಿ 
ವಾಣಿಜ್ಯ

ಭಾರತದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಆಪಲ್ ಸಂಸ್ಥೆಗೆ ಆಹ್ವಾನ

'ಡಿಜಿಟಲ್ ಭಾರತ' ಪ್ರಚಾರವನ್ನು ಅನುಷ್ಟಾನಗೊಳಿಸುವತ್ತ ಹೆಜ್ಜೆ ಹಾಕಿರುವ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ನವದೆಹಲಿ: 'ಡಿಜಿಟಲ್ ಭಾರತ' ಪ್ರಚಾರವನ್ನು ಅನುಷ್ಟಾನಗೊಳಿಸುವತ್ತ ಹೆಜ್ಜೆ ಹಾಕಿರುವ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಭಾರತದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಆಪಲ್ ಸಂಸ್ಥೆಗೆ ಆಹ್ವಾನ ನೀಡಿದ್ದಾರೆ.

ಆಪಲ್ ಸಂಸ್ಥೆಯ ಅಧಿಕಾರಿ ಜಾನ್ ರೆಯ್ನಾಲ್ಡ್ಸ್ ಅವರನ್ನು ಶುಕ್ರವಾರ ಭೇಟಿ ಮಾಡಿದ ಪ್ರಸಾದ್ ಕ್ಯುಪರ್ಟಿನೋ ಮೂಲದ ಈ ಸಂಸ್ಥೆಗೆ ತನ್ನ ಇರುವಿಕೆಯನ್ನು ದೇಶದಲ್ಲಿ ವಿಸ್ತರಿಸುವಂತೆ ಹೇಳಿದ್ದಾರೆ.

"ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಇಲ್ಲದೆಯೂ ಆಪಲ್ ಭಾರದಲ್ಲಿ ಭದ್ರ ಸ್ಥಾನ ಹೊಂದಿದೆ. ಇನ್ನು ಹೆಚ್ಚು ವಿಸ್ತರಣೆ ಮಾಡಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಮನವಿ ಮಾಡಿದ್ದೇನೆ" ಎಂದು ಪ್ರಸಾದ್ ತಿಳಿಸಿದ್ದಾರೆ.

ಈಗ ಸದ್ಯಕ್ಕೆ ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಇನ್ನು ಹೆಚ್ಚಿನ ಸವಲತ್ತುಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಪ್ರಸಾದ್ ತಿಳಿಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರಗಳಿಂದಲು ಸೌಲಭ್ಯಗಳು ದೊರಕಲಿವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT