ಸಂಗ್ರಹ ಚಿತ್ರ 
ವಾಣಿಜ್ಯ

ಐಟಿ ರಿಟರ್ನ್ಸ್ ಇನ್ನು ಸರಳ

ಆನ್‍ಲೈನ್ ಮೂಲಕ ಐಟಿ ರಿಟರ್ನ್ಸ್ ಸಲ್ಲಿಸುವವರು ಇನ್ನು ಮುಂದೆ ಸ್ವೀಕೃತಿ ಪತ್ರ(ಅಕ್ನಾಲೆಡ್ಜ್‍ಮೆಂಟ್)ವನ್ನು ಅಂಚೆ ಮೂಲಕ ಕಳುಹಿಸಬೇಕಾಗಿಲ್ಲ...

ನವದೆಹಲಿ: ಆನ್‍ಲೈನ್ ಮೂಲಕ ಐಟಿ ರಿಟರ್ನ್ಸ್ ಸಲ್ಲಿಸುವವರು ಇನ್ನು ಮುಂದೆ ಸ್ವೀಕೃತಿ ಪತ್ರ(ಅಕ್ನಾಲೆಡ್ಜ್‍ಮೆಂಟ್)ವನ್ನು ಅಂಚೆ ಮೂಲಕ ಕಳುಹಿಸಬೇಕಾಗಿಲ್ಲ.

ಬದಲಿಗೆ ಆಧಾರ್ ಆಧರಿತ ಎಲೆಕ್ಟ್ರಾನಿಕ್ ದೃಢೀಕರಣ ಕೋಡ್ ಮೂಲಕ ಈ ದಾಖಲೆಯನ್ನು ದೃಢೀಕರಿಸಲಾಗುತ್ತದೆ. ತೆರಿಗೆದಾರರಿಗೆ ಸುಲಭವಾಗಲೆಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ) ಈ ಹೊಸ ನಿಯಮ ಜಾರಿ ಮಾಡಿದೆ. ಅದರಂತೆ, 2015-16ರ ಐಟಿಆರ್ ಅರ್ಜಿಯಲ್ಲಿ ಹೊಸ ಕಾಲಂ ಸೇರಿಸಲಾಗಿದೆ.

ಅದರಲ್ಲಿ ತೆರಿಗೆದಾರರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಈ ಸಂಖ್ಯೆಯನ್ನು ಆದಾಯ ತೆರಿಗೆ ಇಲಾಖೆಯು ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ಒನ್ ಟೈಂ ಪಾಸ್‍ವರ್ಡ್ ಮೂಲಕ ದೃಢೀಕರಿಸುತ್ತದೆ. ಇಲಾಖೆಯ ಇ-ಫೈಲಿಂಗ್ ಲಿಂಕ್‍ನ ವೆಬ್‍ಸೈಟ್‍ಗೆ ಶೀಘ್ರದಲ್ಲೇ ಇದನ್ನು ಸೇರಿಸಲಾಗುತ್ತದೆ.

ಹೀಗಾಗಿ ತೆರಿಗೆದಾರರು ಬೆಂಗಳೂರಿನಲ್ಲಿರುವ ಸಿಪಿಸಿಗೆ ಸ್ವೀಕೃತಿ ಪತ್ರವನ್ನು ಕಳುಹಿಸುವ ಕಷ್ಟ ಇರುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT