ಅಕ್ಟೋಬರ್‍ವರೆಗೂ ಈರುಳ್ಳಿ ದರ ಗಗನಮುಖಿ (ಸಂಗ್ರಹ ಚಿತ್ರ) 
ವಾಣಿಜ್ಯ

ಅಕ್ಟೋಬರ್‍ವರೆಗೂ ಈರುಳ್ಳಿ ದರ ಗಗನಮುಖಿ

ಅಕಾಲಿಕ ಮಳೆ ಮತ್ತು ಉತ್ಪಾದನೆಯಲ್ಲಾದ ಇಳಿಕೆಯು ಈರುಳ್ಳಿ ದರವನ್ನು ಗಗನಮುಖಿಯಾಗಿಸಿದೆ. ಈರುಳ್ಳಿ ದರವು ದಿನೇ ದಿನೆ ಏರಿಕೆಯಾಗುತ್ತಿದ್ದು, ದೇಶಾದ್ಯಂತ ಮುಂದಿನ ಬೆಳೆಯು ಮಾರುಕಟ್ಟೆ ತಲುಪುವವರೆಗೂ ಅಂದರೆ ಅಕ್ಟೋಬರ್‍ವರೆಗೂ ದರ ಏರಿಕೆ ಮುಂದುವರಿಯಲಿದೆ...

ನವದೆಹಲಿ: ಅಕಾಲಿಕ ಮಳೆ ಮತ್ತು ಉತ್ಪಾದನೆಯಲ್ಲಾದ ಇಳಿಕೆಯು ಈರುಳ್ಳಿ ದರವನ್ನು ಗಗನಮುಖಿಯಾಗಿಸಿದೆ. ಈರುಳ್ಳಿ ದರವು ದಿನೇ ದಿನೆ ಏರಿಕೆಯಾಗುತ್ತಿದ್ದು, ದೇಶಾದ್ಯಂತ ಮುಂದಿನ ಬೆಳೆಯು ಮಾರುಕಟ್ಟೆ ತಲುಪುವವರೆಗೂ ಅಂದರೆ ಅಕ್ಟೋಬರ್‍ವರೆಗೂ ದರ ಏರಿಕೆ ಮುಂದುವರಿಯಲಿದೆ.

2014-15ರ ವಿತ್ತೀಯ ವರ್ಷದಲ್ಲಿ 2 ಕೋಟಿ ಟನ್ ಈರುಳ್ಳಿ ಉತ್ಪಾದನೆಯಾಗಿದೆ. ಈ ಪೈಕಿ ಶೇ.30-35ರಷ್ಟು ಫೆಬ್ರವರಿಯಿಂದ ಏಪ್ರಿಲ್‍ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ನಾಶವಾಗಿ ಹೋಗಿದೆ ಎಂದು ಮುಂಬೈನ ಸಗಟು ಈರುಳ್ಳಿ ವ್ಯಾಪಾರಿಗಳ ಒಕ್ಕೂಟ ತಿಳಿಸಿದೆ.

``ಪೂರೈಕೆ ಕೊರತೆ ಉಂಟಾಗದಂತೆ ಈರುಳ್ಳಿಯನ್ನು ದಾಸ್ತಾನು ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಜತೆಗೆ, ರಫ್ತಿಗೆ ಮಿತಿ ಹೇರುವಲ್ಲೂ ವಿಳಂಬ ಮಾಡಿದ್ದಾರೆ. ಪ್ರತಿ ವರ್ಷ ಈರುಳ್ಳಿ ದರ ಏರಿಕೆಯಾಗಲು ಇದೇ ಪ್ರಮುಖ ಕಾರಣ'' ಎಂದು ಬೆಂಗಳೂರು ಕೃಷಿ ಮಾರುಕಟ್ಟೆಯ ಸಗಟು ವ್ಯಾಪಾರಸ್ಥ ಶ್ರೀನಿವಾಸ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT