ಸಾಂದರ್ಭಿಕ ಚಿತ್ರ 
ವಾಣಿಜ್ಯ

ಪಾಸ್‍ವರ್ಡ್ ದುರ್ಬಳಕೆ ತಪ್ಪಿಸಿ

ಅಧಿಕಾರಿಗಳು ತಮ್ಮ ಯೂಸರ್-ಐಡಿ ಮತ್ತು ಪಾಸ್‍ವರ್ಡ್ ಅನ್ನು ಅನಧಿಕೃತ ವ್ಯಕ್ತಿಗಳೊಂದಿಗೆಹಂಚಿಕೊಳ್ಳದಂತೆ ಆಗಾಗ್ಗೆ ದಿಢೀರ್ ತಪಾಸಣೆ ನಡೆಸಬೇಕು...

ನವದೆಹಲಿ: ಅಧಿಕಾರಿಗಳು ತಮ್ಮ ಯೂಸರ್-ಐಡಿ ಮತ್ತು ಪಾಸ್‍ವರ್ಡ್ ಅನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳದಂತೆ ಆಗಾಗ್ಗೆ ದಿಢೀರ್ ತಪಾಸಣೆ ನಡೆಸಬೇಕು ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಮತ್ತು ವಿಮಾ ಕಂಪನಿಗಳ ಜಾಗೃತ ಅಧಿಕಾರಿಗಳಿಗೆ ಕೇಂದ್ರ ಜಾಗೃತ ಆಯೋಗ(ಸಿವಿಸಿ) ಸೂಚಿಸಿದೆ.
ಬ್ಯಾಂಕಿಂಗ್, ವಿಮೆ, ಕೇಂದ್ರ ಸರ್ಕಾರಿ ವಲಯದ ಸಂಸ್ಥೆಗಳು ಮತ್ತು ಇತರೆಕ್ಷೇತ್ರಗಳು ಕಂಪ್ಯೂಟರೀಕೃತ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತವೆ. ಇಲ್ಲಿ ಅಧಿಕಾರಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್‍ವರ್ಡ್‍ಗಳನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿ ಕೊಂಡಾಗ, ವಂಚನೆ ನಡೆಯುವ ಸಾಧ್ಯತೆಯಿರುತ್ತದೆ. ಆ ಅಧಿಕಾರಿ ವರ್ಗಾವಣೆಯಾದರೂ, ನಿವೃತ್ತಿ ಹೊಂದಿದರೂ, ಅಮಾನತಾದರೂಅಥವಾ ದೀರ್ಘಕಾಲದ ರಜೆಯಲ್ಲಿ ಹೋದರೂ ಯೂಸರ್ ಐಡಿ, ಪಾಸ್ ವರ್ಡ್‍ಗಳನ್ನು ಡಿಸೇಬಲ್ ಮಾಡಿರುವುದಿಲ್ಲ. ಹೀಗಾಗಿ ಅವರ ಪಾಸ್‍ವರ್ಡ್‍ಗಳನ್ನು ಅನಧಿಕೃತ ವ್ಯಕ್ತಿಗಳು ದುರುಪಯೋಗ  ಪಡಿಸಿಕೊಳ್ಳುತ್ತಾರೆ ಎಂದು ಸಿವಿಸಿ ಹೇಳಿದೆ. ಈ ಹಿನ್ನೆಲೆಯಲ್ಲಿ ಸಲಹೆ ನೀಡಿರುವ ಸಿವಿಸಿ, ಅಧಿಕಾರಿಗಳು ಆಗಾಗ ಪಾಸ್ ವರ್ಡ್‍ಗಳನ್ನು ಬದಲಿಸುತ್ತಿರಬೇಕು. ಜತೆಗೆ, ದಿಢೀರ್ ತಪಾಸಣೆ ನಡೆಸಿ ಯಾರಾದರೂ ತಮ್ಮ ಪಾಸ್‍ವರ್ಡ್ ಗಳನ್ನು ಬೇರೆಯವರೊಂದಿಗೆ ಹಂಚಿ ಕೊಂಡಿದ್ದಾರೆಯೇ ಎಂಬುದನ್ನು
ತಿಳಿಯುವ ಕೆಲಸವಾಗಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT