ಆರ್ ಬಿ ಐ ಅಧಿಕಾರಿಗಳ ಪತ್ರಿಕಾಗೋಷ್ಠಿ (ಕೃಪೆ: ಪಿಟಿಐ) 
ವಾಣಿಜ್ಯ

ಕೇಂದ್ರ ಸರ್ಕಾರದ ಜತೆ ಭಿನ್ನಾಭಿಪ್ರಾಯವಿಲ್ಲ

ದೇಶದ ಹಣಕಾಸು ವ್ಯವಸ್ಥೆಯಲ್ಲಿ ತರಬೇಕಾದ ಬದಲಾವಣೆಗಳ ಕುರಿತು ನ್ಯಾಯ ಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ಸಲ್ಲಿಸಿರುವ ಭಾರತೀಯ...

ಇಂದೋರ್: ದೇಶದ ಹಣಕಾಸು ವ್ಯವಸ್ಥೆಯಲ್ಲಿ ತರಬೇಕಾದ ಬದಲಾವಣೆಗಳ ಕುರಿತು ನ್ಯಾಯ ಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ಸಲ್ಲಿಸಿರುವ ಭಾರತೀಯ ಹಣಕಾಸು ನಸಂಹಿತೆಯಲ್ಲಿ ಪ್ರಸ್ತಾಪಿಸಿರುವ ಹಣಕಾಸು ನೀತಿ ಸಮಿತಿ (ಎಂಪಿಸಿ) ಕುರಿತುಕೇಂದ್ರ ಸರ್ಕಾರದ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಆರ್‍ಬಿಐ ಉಪ ಗೌರ್ನರ್
ಎಸ್.ಎಸ್.ಮುಂದ್ರ ಹೇಳಿದ್ದಾರೆ. ಆರ್‍ಬಿಐನ ಪ್ರಮುಖ ಬಡ್ಡಿದರ ಗಳನ್ನು ಗೌರ್ನರ್ ನಿರ್ಧರಿಸದೆ ಹಣಕಾಸು ನೀತಿ ಸಮಿತಿ ನಿರ್ಧರಿಸಬೇಕೆಂದು ವರದಿಯಲ್ಲಿ ಪ್ರಸ್ತಾಪಿಸಲಾಗಿ
ದೆ. ಇದರಿಂದ ಗೌರ್ನರ್ ಅಧಿಕಾರ ಮೊಟಕಾಗಲಿದೆ. ದೇಶದಆರ್ಥಿಕ ವಲಯದಲ್ಲಿ ಈ ಕುರಿತು ಭಾರಿ ಚರ್ಚೆಗಳಾಗುತ್ತಿವೆ.ಬಡ್ಡಿದರಗಳನ್ನು ನಿಗದಿಪಡಿಸಲು ಸಮಿತಿಯೊಂದನ್ನು ರಚಿಸಬೇಕೆಂದು ಆರ್‍ಬಿಐ ಬಹಳ ಹಿಂದೆಯೇ ಹೇಳಿತ್ತು. ಕೆಲವು ದೇಶಗಳಲ್ಲಿ ಈಗಾಗಲೆ ಇಂತಹ ಸಮಿತಿಗಳಿದ್ದು ಪ್ರಮುಖ ಹಣಕಾಸು ನೀತಿಗಳನ್ನು ರೂಪಿಸುತ್ತಿವೆಎಂದಿದ್ದಾರೆ. ಎಂಪಿಸಿ ರಚಿಸುವುದಕ್ಕೆ ಸಂಬಂಧಿಸಿ ದಂತೆ ಆರ್‍ಬಿಐ ಈ ಹಿಂದೆಯೂ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಈಗಲೂ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಬಡ್ಡಿದರಗಳನ್ನು ಕಡಿತಗೊಳಿಸುವ ಕುರಿತು ಪ್ರತಿಕ್ರಿಯಿಸಿರುವ ಅವರು ದೇಶದ ಆರ್ಥಿಕ ಪರಿಸ್ಥಿತಿಯನ್ನು ಇದು ಅವಲಂಬಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬ್ಯಾಂಕ್ ಗಳಲ್ಲಿ ಅನುತ್ಪಾದಕ ಆಸ್ತಿ ಮತ್ತು ವಸೂಲಾಗದ ಸಾಲಗಳ ಪ್ರಮಾಣ ಹೆಚ್ಚುತ್ತಿರುವುದರ ಬಗ್ಗೆಯೂ ಮುಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT