ಆರ್ ಬಿ ಐ ಅಧಿಕಾರಿಗಳ ಪತ್ರಿಕಾಗೋಷ್ಠಿ (ಕೃಪೆ: ಪಿಟಿಐ) 
ವಾಣಿಜ್ಯ

ಕೇಂದ್ರ ಸರ್ಕಾರದ ಜತೆ ಭಿನ್ನಾಭಿಪ್ರಾಯವಿಲ್ಲ

ದೇಶದ ಹಣಕಾಸು ವ್ಯವಸ್ಥೆಯಲ್ಲಿ ತರಬೇಕಾದ ಬದಲಾವಣೆಗಳ ಕುರಿತು ನ್ಯಾಯ ಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ಸಲ್ಲಿಸಿರುವ ಭಾರತೀಯ...

ಇಂದೋರ್: ದೇಶದ ಹಣಕಾಸು ವ್ಯವಸ್ಥೆಯಲ್ಲಿ ತರಬೇಕಾದ ಬದಲಾವಣೆಗಳ ಕುರಿತು ನ್ಯಾಯ ಮೂರ್ತಿ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ಸಲ್ಲಿಸಿರುವ ಭಾರತೀಯ ಹಣಕಾಸು ನಸಂಹಿತೆಯಲ್ಲಿ ಪ್ರಸ್ತಾಪಿಸಿರುವ ಹಣಕಾಸು ನೀತಿ ಸಮಿತಿ (ಎಂಪಿಸಿ) ಕುರಿತುಕೇಂದ್ರ ಸರ್ಕಾರದ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಆರ್‍ಬಿಐ ಉಪ ಗೌರ್ನರ್
ಎಸ್.ಎಸ್.ಮುಂದ್ರ ಹೇಳಿದ್ದಾರೆ. ಆರ್‍ಬಿಐನ ಪ್ರಮುಖ ಬಡ್ಡಿದರ ಗಳನ್ನು ಗೌರ್ನರ್ ನಿರ್ಧರಿಸದೆ ಹಣಕಾಸು ನೀತಿ ಸಮಿತಿ ನಿರ್ಧರಿಸಬೇಕೆಂದು ವರದಿಯಲ್ಲಿ ಪ್ರಸ್ತಾಪಿಸಲಾಗಿ
ದೆ. ಇದರಿಂದ ಗೌರ್ನರ್ ಅಧಿಕಾರ ಮೊಟಕಾಗಲಿದೆ. ದೇಶದಆರ್ಥಿಕ ವಲಯದಲ್ಲಿ ಈ ಕುರಿತು ಭಾರಿ ಚರ್ಚೆಗಳಾಗುತ್ತಿವೆ.ಬಡ್ಡಿದರಗಳನ್ನು ನಿಗದಿಪಡಿಸಲು ಸಮಿತಿಯೊಂದನ್ನು ರಚಿಸಬೇಕೆಂದು ಆರ್‍ಬಿಐ ಬಹಳ ಹಿಂದೆಯೇ ಹೇಳಿತ್ತು. ಕೆಲವು ದೇಶಗಳಲ್ಲಿ ಈಗಾಗಲೆ ಇಂತಹ ಸಮಿತಿಗಳಿದ್ದು ಪ್ರಮುಖ ಹಣಕಾಸು ನೀತಿಗಳನ್ನು ರೂಪಿಸುತ್ತಿವೆಎಂದಿದ್ದಾರೆ. ಎಂಪಿಸಿ ರಚಿಸುವುದಕ್ಕೆ ಸಂಬಂಧಿಸಿ ದಂತೆ ಆರ್‍ಬಿಐ ಈ ಹಿಂದೆಯೂ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಈಗಲೂ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಬಡ್ಡಿದರಗಳನ್ನು ಕಡಿತಗೊಳಿಸುವ ಕುರಿತು ಪ್ರತಿಕ್ರಿಯಿಸಿರುವ ಅವರು ದೇಶದ ಆರ್ಥಿಕ ಪರಿಸ್ಥಿತಿಯನ್ನು ಇದು ಅವಲಂಬಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬ್ಯಾಂಕ್ ಗಳಲ್ಲಿ ಅನುತ್ಪಾದಕ ಆಸ್ತಿ ಮತ್ತು ವಸೂಲಾಗದ ಸಾಲಗಳ ಪ್ರಮಾಣ ಹೆಚ್ಚುತ್ತಿರುವುದರ ಬಗ್ಗೆಯೂ ಮುಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT