ಸಾಂದರ್ಭಿಕ ಚಿತ್ರ 
ವಾಣಿಜ್ಯ

ಬಾಳೆ ಬೆಲೆ ಕುಸಿತ: ರೈತರ ಕಷ್ಟ ತಪ್ಪಿಲ್ಲ; ಗ್ರಾಹಕರಿಗೆ ಎಟುಕಿಲ್ಲ

ಮಾರುಕಟ್ಟೆಯಲ್ಲಿ ಬಾಳೆ ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದಾರೆ. ರೈತರು ಹಾಗೂ ವ್ಯಾಪಾರಸ್ಥರು ಬಾಳೆಗೊನೆಗಳನ್ನು...

ಬೆಂಗಳೂರು: ಮಾರುಕಟ್ಟೆಯಲ್ಲಿ ಬಾಳೆ ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದಾರೆ. ರೈತರು ಹಾಗೂ ವ್ಯಾಪಾರಸ್ಥರು ಬಾಳೆಗೊನೆಗಳನ್ನು ಬೀದಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ.
ಆದರೂ ಬೆಲೆ ಕುಸಿತದ ಲಾಭ ಮಾತ್ರ ಗ್ರಾಹಕರಿಗೆ ತಲುಪುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹದಿಂದ ರೈತರು ಈ ವರ್ಷ ಹೆಚ್ಚಿನ ಬೆಳೆ ಬೆಳೆದಿದ್ದಾರೆ. 
ಪ್ರತಿ ತಾಲೂಕಿನಲ್ಲಿ 150ಕ್ಕೂ ಅಧಿಕ ರೈತರು ಸುಮಾರು 700ರಿಂದ 800 ಹೆಕ್ಟೇರ್ ನಷ್ಟು ಪ್ರದೇಶದಲ್ಲಿ ಬಾಳೆ ಬೆಳೆದಿದ್ದಾರೆ. ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಜಿ ಬಾಳೆಹಣ್ಣಿಗೆ 35ರಿಂದ 50ರು. ಇತ್ತು. ಈಗ ಆವಕ ಹೆಚ್ಚಾಗಿರುವುದರಿಂದ ಕೆಜಿ ದರ ರು.2ರಿಂದ 12ರು.ಗೆ ಇಳಿದಿದೆ. 
ಕೊಳ್ಳುವವರೇ ಇಲ್ಲ: ಮತ್ತೊಂದು ಕಡೆ ಚಳಿಗಾಲದಿಂದಾಗಿ ಗ್ರಾಹಕರು ಹೆಚ್ಚಾಗಿ ಬಾಳೆ ಖರೀದಿಸುತ್ತಿಲ್ಲ. ಇದರಿಂದ ವ್ಯಾಪಾರಸ್ಥರು ಬಾಳೆಹಣ್ಣಿನ ವ್ಯಾಪಾರವನ್ನೇ ಬಿಡುವಂತಾಗಿದೆ.
ಇದರಿಂದ ರೈತರು ಅನ್ಯಮಾರ್ಗವಿಲ್ಲದೆ ಆಟೋ, ಟಾಟಾಏಸ್, ಟ್ರ್ಯಾಕ್ಟರುಗಳಲ್ಲಿ ತಂದು ಮಾರಾಟ ಮಾಡುತ್ತಿದ್ದಾರೆ. ಮಾಡಿದ ಖರ್ಚೂ ಗಿಟ್ಟುತ್ತಿಲ್ಲ. ರೈತರು ಉತ್ತಮ ಲಾಭದ ನಿರೀಕ್ಷೆಯಿಂದ ನೀರಾವರಿ ಮಾಡಿಕೊಂಡು ಬಾಳೆ ಬೆಳೆದಿದ್ದರು. 
ಫಸಲು ಕೂಡ ಉತ್ತಮವಾಗಿದೆ. ತಮಿಳುನಾಡು, ಕೇರಳದಲ್ಲಿ ಬಾಳೆ ಬೆಳೆ ನಾಶವಾದ ಕಾರಣ ಹೆಚ್ಚಿನ ಬೆಲೆ ಸಿಗಲಿದೆ ಎಂಬ ರೈತರ ನಂಬಿಕೆ ಸುಳ್ಳಾಗಿದೆ. ಆದರೆ ಬೆಂಗಳೂರು ನಗರದಲ್ಲಿ ಹಣ್ಣಿನ ಬೆಲೆ ಕಡಿಮೆಯಾಗಿರುವುದು ಕೆಜಿಗೆ ರು.7 ಮಾತ್ರ. 
ಮಧ್ಯವರ್ತಿಗಳ ಹಾವಳಿಯಿಂದಾಗಿ ರೈತರಿಗೆ ಒಳ್ಳೆಯ ಬೆಲೆ ಸಿಗುತ್ತಿಲ್ಲ. ಚಳಿ ಹೆಚ್ಚಾಗಿರುವುದೂ ಸಂಕಷ್ಟ ತಂದಿದೆ. ಸಂಪೂರ್ಣ ಬಿಸಿಲು ಬಂದ ನಂತರ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT