ಅರುಣ್ ಜೇಟ್ಲಿ 
ವಾಣಿಜ್ಯ

ಹೊಸ ತೆರಿಗೆ ವಿನಾಯಿತಿ ಸದ್ಯಕ್ಕಿಲ್ಲ: ಸಚಿವ ಜೇಟ್ಲಿ ಸುಳಿವು

ತೈಲಬೆಲೆ ಕುಸಿದಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ, ಹಾಗಾಗಿ ಈ ಬಾರಿ ಬಜೆಟ್‍ನಲ್ಲಿ ಸಾಕಷ್ಟು ತೆರಿಗೆ ವಿನಾಯ್ತಿ ದೊರೆಯಬಹುದು...

ನವದೆಹಲಿ: ತೈಲಬೆಲೆ ಕುಸಿದಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ, ಹಾಗಾಗಿ ಈ ಬಾರಿ ಬಜೆಟ್‍ನಲ್ಲಿ ಸಾಕಷ್ಟು ತೆರಿಗೆ ವಿನಾಯ್ತಿ ದೊರೆಯಬಹುದು ಎಂದು ನೀವು ನಿರೀಕ್ಷಿಸಿದ್ದರೆ
ಖಂಡಿತಾ ನಿರಾಸೆ ಕಾದಿರುತ್ತದೆ. ಪ್ರಸಕ್ತ ಬಜೆಟ್‍ನಲ್ಲಿ ಹೊಸ ತೆರಿಗೆ ವಿನಾಯ್ತಿ ನೀಡದಿರುವ ಮುನ್ಸೂಚನೆಯನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನೀಡಿದ್ದಾರೆ.
ಫೆಬ್ರವರಿ 28ಕ್ಕೆ ಜೇಟ್ಲಿ ಅವರು ಮಂಡಿಸಲಿರುವ ಬಜೆಟ್ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ದಿಕ್ಸೂಚಿ ಬಜೆಟ್ ಆಗಲಿದೆ. ಆದರೆ, ಜನಪ್ರಿಯತೆಗೆ ಒತ್ತು ನೀಡುವ ಬದಲು ರಾಷ್ಟ್ರದ ಹಣಕಾಸು ಪರಿಸ್ಥಿತಿ ಸುಭದ್ರಗೊಳಿಸುವುದಕ್ಕೆ ಜೇಟ್ಲಿ ಆದ್ಯತೆ ನೀಡಲಿದ್ದಾರೆ. ಆಯವ್ಯಯ ಪತ್ರದಲ್ಲಿ ಸಮತೋಲನ ಕಾಯ್ದುಕೊಳ್ಳುವವರೆಗೂ ತೆರಿಗೆ ವಿನಾಯ್ತಿ ನೀಡಲು ಸಾಧ್ಯವಾಗದು ಎಂದು ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಣದುಬ್ಬರ ನಿಯಂತ್ರಣದಲ್ಲಿದೆ. ಅದರ ಫಲಶೃತಿ ನಿಧಾನವಾಗಿ ಹೊರಹೊಮ್ಮಬೇಕಿದೆ. ಶೇ.4.5ರ ಆಜುಬಾಜಿನಲ್ಲಿರುವ ವಿತ್ತೀಯ
ಕೊರತೆಯನ್ನು ಮುಂದಿನ 2 ವರ್ಷಗಳಲ್ಲಿ ಶೇ.3ಕ್ಕೆ ತಗ್ಗಿಸುವ ಗುರಿ ಮೋದಿ ಸರ್ಕಾರದ್ದಾಗಿದೆ. ಆ ನಿಟ್ಟಿನಲ್ಲಿಯೇ ಜೇಟ್ಲಿ ಬಜೆಟ್ ಸಿದ್ಧಪಡಿಸುತ್ತಿದ್ದಾರೆ. ದಾವೊಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಂಡಿರುವ ಜೇಟ್ಲಿ, ಸಿಎನ್‍ಬಿಸಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ, ಬಜೆಟ್ ನಲ್ಲಿ ಸಮತೋಲನ ಕಾಯ್ದುಕೊಳ್ಳುವವ ರೆಗೆ ಯಾವುದೇ ತೆರಿಗೆ ಹಿಂದಕ್ಕೆ ಪಡೆಯುವುದು ಕಷ್ಟ ಎಂದಿದ್ದಾರೆ. ಭಾರತ ಈಗ ವಿಶ್ವ ಆರ್ಥಿಕತೆಯ ಕೇಂದ್ರ
ಬಿಂದುವಾಗಿದೆ.

ಹೂಡಿಕೆದಾರರಲ್ಲಿ ಸಕಾರಾತ್ಮಕ ಭಾವನೆ ಶೀಘ್ರದಲ್ಲಿಯೇ ಹೂಡಿಕೆಯಾಗಿ ಪರಿವರ್ತನೆಗೊಳ್ಳಲಿದೆ ಎಂದು ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಜಿಎಸ್‍ಟಿ ತಿದ್ದುಪಡಿ ಮಸೂದೆ ಅಂಗೀಕರಿಸುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ . ಖರೀದಿ ಶಕ್ತಿ ಇರುವ ಕುಟುಂಬಗಳಿಗೆ ಸಬ್ಸಿಡಿಯಲ್ಲಿ ನೀಡುತ್ತಿರುವ ಅಡುಗೆ ಅನಿಲ ಸರಬರಾಜು ನಿಲ್ಲಿಸುವ ಪ್ರಸ್ತಾಪವೂ ಜೇಟ್ಲಿ ಅವರ ಮುಂದಿದೆ. ಅರ್ಹರಿಗೆ ಸಬ್ಸಿಡಿ ಲಾಭ ತಲುಪಬೇಕು ಎಂಬ ಧ್ಯೇಯ ಮೋದಿ ಸರ್ಕಾರದ್ದು. ಇದೇ ವೇಳೆ, ವಿಮೆ ವಿಧೇಯಕವು ಬಜೆಟ್ ಅ„ವೇಶನದಲ್ಲಿ ಅಂಗೀಕಾರ ಆಗದೇ ಇದ್ದಲ್ಲಿ ಜಂಟಿ ಅಧಿವೇಶನ ಕರೆದು ಅದಕ್ಕೆ ಅಂಗೀಕಾರ ಪಡೆಯಲಾಗುವುದು ಎಂದೂ ಜೇಟ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT