ಅರುಣ್ ಜೇಟ್ಲಿಶ್(ಸಂಗ್ರಹ ಚಿತ್ರ) 
ವಾಣಿಜ್ಯ

ಬಡತನ ನಿರ್ಮೂಲನೆಗೆ ಶೇ. 8 ರಿಂದ 10ರಷ್ಟು ಆರ್ಥಿಕ ಪ್ರಗತಿ ಅಗತ್ಯ: ಜೇಟ್ಲಿ

ಬಡತನ ನಿರ್ಮೂಲನೆಗೆ ಶೇಕಡ 8ರಿಂದ 10ರಷ್ಟು ಆರ್ಥಿಕ ಪ್ರಗತಿ ಅಗತ್ಯ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ...

ನವದೆಹಲಿ: ಬಡತನ ನಿರ್ಮೂಲನೆಗೆ ಶೇಕಡ 8ರಿಂದ 10ರಷ್ಟು ಆರ್ಥಿಕ ಪ್ರಗತಿ ಅಗತ್ಯ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಬಡತನ ನಿರ್ಮೂಲನೆಗೆ ಸುಧಾರಣೆಗಾಗಿ ಭೂಸ್ವಾಧೀನ ಹಾಗೂ ಸರಕು ಮತ್ತು ಸೇವಾ ತೆರಿಗೆ ಮಸೂದೆಗಳಿಗೆ ಸಂಸತ್ತಿನಲ್ಲಿ ಅನುಮೋದನೆ ದೊರೆಯಬೇಕು ಎಂದಿದ್ದಾರೆ.

 ಸಾಮಾಜಿಕ, ಆರ್ಥಿಕ ಹಾಗೂ ಜಾತಿ ಗಣತಿ ವರದಿ ಗ್ರಾಮೀಣ ಭಾರತದ ಕರಾಳ ಚಿತ್ರಣದ ಕುರಿತಂತೆ ಕಳೆದ ಮೂರು ದಿನಗಳ ಹಿಂದೆ ವರದಿ ಬಿಡುಗಡೆಯಾಗಿತ್ತು. ಈ ಸಂಬಂಧ ಜೇಟ್ಲಿ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದು, ‘ಕೆಲವು ನಿರ್ದಿಷ್ಟ ಯೋಜನೆಗಳಿಗಿಂತಲೂ ಅಭಿವೃದ್ಧಿ ಹಾಗೂ ಆರ್ಥಿಕ ಸುಧಾರಣೆಗಳು ಬಡವರಿಗೆ ನೆರವಾಗುತ್ತವೆ’ ಎಂದು ಈ ವರದಿಯು ಸ್ಪಷ್ಟಪಡಿಸಿದೆ ಎಂದು ಜೇಟ್ಲಿ ತಿಳಿಸಿದ್ದಾರೆ.

ಬಡತನ ನಿರ್ಮೂಲನೆ ನಿಟ್ಟಿನಲ್ಲಿ ‘ಎಲ್ಲಾ ಭಾರತೀಯರಿಗೆ ಉತ್ತಮ ಉದ್ಯೋಗಾವಕಾಶಗಳು ಸೃಷ್ಟಿಸಲು ಶೇಕಡ 8–10ರಷ್ಟು ಆರ್ಥಿಕ ಪ್ರಗತಿಯನ್ನು ತ್ವರಿತವಾಗಿ ಸಾಧಿಸಬೇಕಿದೆ. ಅದಕ್ಕಾಗಿಯೇ ಸರ್ಕಾರವು ಹೂಡಿಕೆಯನ್ನು ಉತ್ತೇಜಿಸುತ್ತಿದೆ. ಹೂಡಿಕೆ ಕ್ಷೇತ್ರ ಈಗ ಪ್ರಗತಿ ಪಥದತ್ತ ಹೊರಳುತ್ತಿದೆ ಎಂದು ಸಮೀಕ್ಷೆ ಹೇಳಿದ್ದು, ಈ ನಿಟ್ಟಿನಲ್ಲಿ ‘ಜಿಎಸ್‌ಟಿ ಜಾರಿ ಹಾಗೂ ಸುಧಾರಿತ ಭೂಸ್ವಾಧೀನ ಮಸೂದೆಯು ಅದಕ್ಕೆ ಮತ್ತಷ್ಟು ಪುಷ್ಟಿ ನೀಡಲಿದೆ’ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT