ಕೇಂದ್ರ ಸಚಿವ ಸದಾನಂದಗೌಡ 
ವಾಣಿಜ್ಯ

ವಾಣಿಜ್ಯ ಪ್ರಕರಣಗಳ ವಿಲೇವಾರಿಗೆ ರಾಷ್ಟ್ರೀಯ ನೀತಿ: ಸದಾನಂದಗೌಡ

ವಾಣಿಜ್ಯ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕಾಗಿ ಸಹಕಾರಿಯಾಗುವಂತೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ನವದೆಹಲಿ: ವಾಣಿಜ್ಯ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕಾಗಿ ಸಹಕಾರಿಯಾಗುವಂತೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು,  ನ್ಯಾಯಾಲಯದಲ್ಲಿರುವ ವಾಣಿಜ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಮತ್ತು ಪದೆ ಪದೇ ನ್ಯಾಯಾಲಯಗಳಿಗೆ ಅಲೆಯವುದನ್ನು ತಪ್ಪಿಸುವ ಉದ್ದೇಶದಿಂದ ವಾಣಿಜ್ಯ ಪ್ರಕರಣಗಳ ವಿಲೇವಾರಿಗೆ ಸಹಕಾರಿಯಾಗುವಂತೆ ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಿದೆ.

ಪ್ರಾರಂಭದಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾನೂನು ತರುವ ಉದ್ದೇಶವಿತ್ತು. ಪ್ರಸ್ತುತ ಅದನ್ನು ಕೈಬಿಟ್ಟು ಕರಡು ಸಿದ್ಧಪಡಿಸಲಾಗಿದ್ದು, ಸದ್ಯದಲ್ಲಿಯೇ ಸಚಿವ ಸಂಪುಟದ ಮುಂದೆ ತರಲಾಗುವುದು. ಬಳಿಕ ಮುಂಗಾರು ಅಧಿವೇಶನದಲ್ಲಿ ಹೊಸ ಕಾನೂನನ್ನು ಮಂಡಿಸಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ "ದೇಶದ ವಿವಿಧ ನ್ಯಾಯಾಲಯದಲ್ಲಿರುವ ಉಪಯೋಗಕ್ಕೆ ಬಾರದ ಶೇ.46ರಷ್ಟು ಕಾನೂನುಗಳನ್ನು ರದ್ದು ಮಾಡುವಂತೆ ಇಲಾಖೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಸದಾನಂದಗೌಡ ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆಗೆ ಸಿದ್ದು ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ

ಬಿಹಾರದಲ್ಲಿ NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?

ಬಿಹಾರ: ನೂತನ ಸರ್ಕಾರ ರಚನೆಯ ಸರ್ಕಸ್; ಟಿಕೆಟ್ ಹಂಚಿಕೆ ಮಾದರಿಯಲ್ಲೇ ಖಾತೆ ಹಂಚಿಕೆಗೆ NDA ಸೂತ್ರ !

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಸಿಡಿದೆದ್ದ ಡಿಸಿಎಂ ಡಿ.ಕೆ ಶಿವಕುಮಾರ್!

SCROLL FOR NEXT