ಸಹರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ (ಸಂಗ್ರಹ ಚಿತ್ರ) 
ವಾಣಿಜ್ಯ

ಸುಪ್ರೀಂನಿಂದ ಸುಬ್ರತೋ ರಾಯ್ 'ಬೇಲ್ ಭದ್ರತೆ'ಗೆ 3 ತಿಂಗಳ ಗಡುವು

ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಮಂಜೂರಿ...

ನವದೆಹಲಿ: ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಮಂಜೂರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ 'ಜಾಮೀನು ಭದ್ರತಾ ಠೇವಣಿ' ಶೇಖರಿಸುವ ಮಾರ್ಗೋಪಾಯ ರಚನೆಗೆ 3 ತಿಂಗಳ ಕಾಲಾವಕಾಶ ನೀಡಿದೆ.

ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಷೇರುದಾರರ ಹಣವನ್ನು ಹಿಂದಿರುಗಿಸಿದ ಅಥವಾ ಸಂಪೂರ್ಣವಾಗಿ ಹಿಂದುರುಗಿಸುವ ಭರವಸೆ ನೀಡಿದ ನಂತರವೇ ನಿಮಗೆ ಜಾಮೀನು ದೊರೆಯುತ್ತದೆ ಎಂದು ಹೇಳಿದೆ. ಅಲ್ಲದೆ ನ್ಯಾಯಾಲಯ ಕೇಳಿರುವ ಭದ್ರತಾ ಠೇವಣಿ ಇಡುವ ಕುರಿತು ಸೂಕ್ತ ಯೋಜನೆ ತಯಾರಿಸಲು ನ್ಯಾಯಾಲಯ 3 ತಿಂಗಳ ಗಡುವು ಕೂಡ ನೀಡಿದೆ. ಸುಬ್ರತೋ ರಾಯ್ ಅವರಿಗೆ ನ್ಯಾಯಾಲಯ ನೀಡಿರುವ ಅಂತಿಮ ಗಡುವಾಗಿದ್ದು, ಒಂದು ವೇಳೆ ರಾಯ್ ಅವರು ಇದರಲ್ಲಿಯೂ ಜಾಮೀನು ಭದ್ರತೆ ನೀಡುವಲ್ಲಿ ವಿಫಲರಾದರೆ ನ್ಯಾಯಾಲಯ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧಿತರಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಬಿಡುಗಡೆಗೆ ಸುಪ್ರೀಂಕೋರ್ಟ್ 1.6 ಬಿಲಿಯನ್ ಹಣವನ್ನು ಭದ್ರತಾ ಠೇವಣಿಯಾಗಿ ಇಡುವಂತೆ ಸೂಚನೆ ನೀಡಿತ್ತು. ಆದರೆ 6 ಬಾರಿ ಜಾಮೀನಿಗಾಗಿ ಪ್ರಯತ್ನಿಸಿದ್ದ ಸುಬ್ರತೋ ರಾಯ್ ಅವರು 6 ಬಾರಿಯೂ ವಿಫಲರಾಗಿದ್ದರು. ಹೀಗಾಗಿ ಇಂದು ಸುಪ್ರೀಂಕೋರ್ಟ್ ಭದ್ರತಾ ಠೇವಣಿ ಇಡುವ ಕುರಿತು ಸೂಕ್ತ ಮತ್ತು ನಿಖರ ಪ್ರಸ್ತಾಪದೊಂದಿಗೆ ಬನ್ನಿ ಎಂದು 3 ತಿಂಗಳ ಗಡುವು ನೀಡಿದೆ.

ಸಹರಾ ಸಮೂಹ ಸಂಸ್ಥೆಯು ತನ್ನ ಸಂಸ್ಥೆಯ ವಿವಿಧ ವಿಭಾಗಗಲ್ಲಿ ಸಾವಿರಾರು ಷೇರುದಾರರು ತೊಡಗಿಸಿದ್ದ ಸುಮಾರು 24000 ಸಾವಿರ ಕೋಟಿ ರುಪಾಯಿಗಳನ್ನು ಷೇರುದಾರರಿಗೆ ಹಿಂತಿರುಗಿಸದ ಹಿನ್ನಲೆಯಲ್ಲಿ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ರನ್ನು ಬಂಧಿಸಲಾಗಿತ್ತು. ಈ ಹಿಂದೆ ತಮ್ಮ ವಯಸ್ಸಾದ ತಾಯಿಯ ಅನಾರೋಗ್ಯ ನೆಪವೊಡ್ಡಿ ಸುಬ್ರತೋ ರಾಯ್ ಅವರು ಜಾಮೀನು ಪಡೆಯಲು ಮುಂದಾಗಿದ್ದರು. ಆದರೆ ಸುಬ್ರತೋ ರಾಯ್ ಅವರ ನಡೆಯನ್ನು ಅರಿತಿದ್ದ ನ್ಯಾಯಾಲಯ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.

ಮತ್ತೆ ತಮ್ಮ ಪ್ರಯತ್ನವನ್ನು ಮುಂದುವರೆಸಿದ್ದ ಅವರು, ಕಂತುಗಳ ಲೆಕ್ಕದಲ್ಲಿ ಷೇರುದಾರರಿಗೆ ಹಣ ನೀಡುತ್ತೇನೆ ಎಂಬ ಪ್ರಸ್ತಾಪ ಮುಂದಿಟ್ಟು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಸುಬ್ರತೋ ರಾಯ್ ಅವರ ಪ್ರಸ್ತಾಪವನ್ನು ತಿರಸ್ಕರಿಸಿದ್ದು, ಇದೊಂದು ಸಂಪೂರ್ಣ ಅವಾಸ್ತವಿಕ ಮತ್ತು ಕಾಲ್ಪನಿಕ ಪ್ರಸ್ತಾಪ ಎಂದು ಅಭಿಪ್ರಾಯಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT