ಅರುಣ್ ಜೇಟ್ಲಿ(ಸಂಗ್ರಹ ಚಿತ್ರ) 
ವಾಣಿಜ್ಯ

ವಿತ್ತೀಯ ಕೊರತೆಯನ್ನು ಶೇ.3.9 ಕ್ಕಿಳಿಸುವುದು ಕೇಂದ್ರದ ಗುರಿ: ಅರುಣ್ ಜೇಟ್ಲಿ

ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಶೇ 3 .6 ರಷ್ಟಾಗಿಸಲು ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಶೇ 3 .6 ರಷ್ಟಾಗಿಸಲು ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಐದು ದಿನಗಳ ಇಂಡಿಯಾ- ಆಫ್ರಿಕಾ ಫೋರಂ ಶೃಂಗಸಭೆಯಲ್ಲಿ ಮಾತನಾಡಿರುವ ಜೇಟ್ಲಿ, ಶೇ.3.9 ಸಾಧಾರಣ ಗುರಿಯಾಗಿದ್ದು, ಪ್ರಸ್ತುತ ಇರುವ ತೆರಿಗೆ ಆದಾಯ ಹಾಗೂ ವೆಚ್ಚಗಳನ್ನು ಗಮನಿಸಿದರೆ ಈ ಗುರಿಯನ್ನು ತಲುಪುವುದು ಸವಾಲಿನ ವಿಷಯ ಅಲ್ಲ.  ವರ್ಷದ ಪ್ರಥಮ ಆರು ತಿಂಗಳಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿದ್ದು, ಉಳಿದ ಎರಡು ತ್ರೈಮಾಸಿಕದಲ್ಲೂ ಇದೇ ಮುಂದುವರೆಯಲಿದೆ ಎಂದು ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ತೆರಿಗೆ ಉತ್ತಮವಾಗಿ ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸಚಿವಾಲಯಗಳ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವ ಸಾಧ್ಯತೆಗಳಿಲ್ಲ ಎಂದು ನಿರೀಕ್ಷಿಸಲಾಗಿದೆ. ಮುಂದಿನ 3 ವರ್ಷಗಳಿಗೆ ವಿತ್ತೀಯ ಕೊರತೆ ಗುರಿ ನಿಗದಿಪಡಿಸಲಾಗಿದ್ದು, 2017 -18 ರ ವೇಳೆಗೆ ಶೇ.3 ರಷ್ಟಾಗಿಸುವ ಗುರಿ ಹೊಂದಲಾಗಿದೆ ಎಂದು ಅರುಣ್ ಜೇಟ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!